Malenadu Mitra
ರಾಜ್ಯಶಿವಮೊಗ್ಗ

ಹೋರಿ ಹಬ್ಬದಲ್ಲಿ ಹೋರಿ ತಿವಿದು ಇಬ್ಬರು ಸಾವು

ಶಿವಮೊಗ್ಗ,ಜ.೧೬: ಸಂಕ್ರಾಂತಿ ಹಬ್ಬದ ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಜೀವಕಳೆದುಕೊಂಡಿದ್ದಾರೆ.
ಶಿವಮೊಗ್ಗ ತಾಲೂಕು ಕೊನಗವಳ್ಳಿಯಲ್ಲಿಹೋರಿ ತಿವಿದ ಕಾರಣ ಶಿವಮೊಗ್ಗ ಆಲ್ಕೊಳದ ಲೋಕೇಶ್(೩೪) ಮೃತಪಟ್ಟಿದ್ದಾರೆ. ಹೋರಿ ಬೆದರಿಸುವ ಸ್ಪರ್ಧೆ ನೋಡುತ್ತಿದ್ದ ನಿಂತಿದ್ದ ಲೋಕೇಶ್‌ಗೆ ಹೋರಿ ತಿವಿದ ಕಾರಣ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಅಸುನೀಗಿದ.
ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕು ಮಳೂರು ಗ್ರಾಮದಲ್ಲಿ ನಡೆದ ಹೋರಿಹಬ್ಬದಲ್ಲಿ ರಂಗನಾಥ್(೨೪) ಹೋರಿ ತಿವಿತದಿಂದಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

Ad Widget

Related posts

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಸಿರಿವಂತರು ಬಡವರ ಸೇವೆಗೆ ಮುಂದಾಗಬೇಕು : ಆರಗ ಜ್ಞಾನೇಂದ್ರ

Malenadu Mirror Desk

ಪಠ್ಯ ಬದಲಾವಣೆ,ಸಚಿವರ ಸಭೆಗೆ ನುಗ್ಗಲೆತ್ನಿಸಿದ ಬಜೆಪಿ ಯುವ ಮೋರ್ಚಾ ಮುಖಂಡರ ಬಂಧನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.