Malenadu Mitra
ರಾಜ್ಯಶಿವಮೊಗ್ಗ

ಪುತ್ರವ್ಯಾಮೋಹ ಮತ್ತು ನಿಯಂತ್ರಣವಿಲ್ಲದ ನಾಲಗೆಯಿಂದ ಈಶ್ವರಪ್ಪ ನಿರ್ಗಮನ

ಶಿವಮೊಗ್ಗ: ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ಅವರ ನಾಲಿಗೆ ಮತ್ತು ಪುತ್ರ ವ್ಯಾಮೋಹ ಕಾರಣ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪನವರು ತಮ್ಮ ನಾಲಿಗೆಯನ್ನು ಮತ್ತು ಪುತ್ರ ವ್ಯಾಮೋಹವನ್ನು ನಿಯಂತ್ರಣದಲ್ಲಿಟ್ಟಿಕೊಂಡಿದ್ದಿದ್ದರೆ  ಇಂದು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.
೩೪ ವರ್ಷಗಳ ಕಾಲ ರಾಜಕಾರಣದಲ್ಲಿದ್ದ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು ಶಿವಮೊಗ್ಗ ಜಿಲ್ಲೆಯ ರಾಜಕಾರಣದ ಮಗ್ಗಲು ಬದಲಾದಂತಾಗಿದೆ. ಈಶ್ವರಪ್ಪ ಅವರಿಗೆ ವ್ಯಕ್ತಿಗತವಾಗಿ ಶತ್ರುಗಳಿಲ್ಲ. ಎಲ್ಲರೊಂದಿಗೆ ಸ್ನೇಹ ಸ್ವಭಾವದೊಂದಿಗೆ ಇದ್ದರು. ಅವರ ವಿರುದ್ಧ ರಾಜಕೀಯ ನಿಲುವು ಏನೇ ಇದ್ದರೂ ಅವರು ನನಗೆ ಆತ್ಮೀಯರೇ ಆಗಿದ್ದರು. ಅವರ ಈ ರೀತಿಯ ನಿರ್ಗಮನ ನೋವುತಂದಿದೆ ಎಂದು  ಹೇಳಿದರು.
ಈಶ್ವರಪ್ಪನವರು ತನ್ನದಲ್ಲದ ತಪ್ಪಿಗಾಗಿ ಈ ರೀತಿ ನಿರ್ಗಮಿಸುತ್ತಿದ್ದಾರೆ. ಮಗನನ್ನು ಮತ್ತು ತಮ್ಮನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಿದ್ದರೆ ಅತ್ಯಂತ ಗೌರವಯುತ ನಾಯಕರಾಗುತ್ತಿದ್ದರು. ಇಂತಹ ಈಶ್ವರಪ್ಪ ಅವರು ಕಣದಿಂದ ಹಿಂದೆ ಸರಿದ ಮಾತ್ರಕ್ಕೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನಿನ್ನೂ ಸ್ಪರ್ಧಾಕಾಂಕ್ಷಿಯಾಗಿದ್ದೇನೆ. ಒಂದೆರೆಡು ದಿನಗಳಲ್ಲಿ ಯಾವ ಪಕ್ಷದಿಂದ ಸ್ಪರ್ಧೆ ನಡೆಸಲಿದ್ದೇನೆ ಎನ್ನುವುದನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ಆಯನೂರು ಮಂಜುನಾಥ್ ತಾವಿನ್ನೂ ಸ್ಪರ್ಧೆಯಲ್ಲಿದ್ದೇನೆ ಎಂದು ಘೋಷಿಸಿದರು.


Ad Widget

Related posts

ಮಹಿಳೆ ಕೊಲೆ ಮಾಡಿ 35 ಲಕ್ಷ ಲಟಪಾಯಿಸಿದ ಗ್ಯಾಂಗ್ ಅಂದರ್, ಚಾಲಕನಾದರೂ ಮಗನಂತೆ ನೋಡಿಕೊಂಡ ಮನೆಯೊಡತಿಯನ್ನೇ ಕೊಲೆಮಾಡಿದ ಪಾತಕಿಗಳು

Malenadu Mirror Desk

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.