Malenadu Mitra
ರಾಜ್ಯಶಿವಮೊಗ್ಗ

ಜೂ 3ಕ್ಕೆ ನಗರಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಸಚಿವರ ಸ್ವಾಗತಕ್ಕೆ ಕಾಂಗ್ರೆಸ್‌ನಿಂದ ಸಿದ್ಧತೆ

ಶಿವಮೊಗ್ಗ, ಜೂ.೧: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆ ಹಾಗೂ ತವರು ಕ್ಷೇತ್ರ ಸೊರಬಕ್ಕೆ ಆಗಮಿಸುತ್ತಿದ್ದು , ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿಗೆ ಹೋಗಿದ್ದ ಮಧು ಬಂಗಾರಪ್ಪ ಅವರು ಸಂಪುಟ ವಿಸ್ತರಣೆ ಮತ್ತು ಬಿಡುವಿಲ್ಲದ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಮುಖವಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಶಾಲಾ ಕಾಲೇಜುಗಳು ಮೇ ೩೧ ರಿಂದಲೇ ಆರಂಭವಾಗಿದ್ದರಿಂದ ಇಲಾಖೆಯ ಅಧಿಕಾರಿಗಳ ಸಭೆ, ಮಕ್ಕಳ ಸ್ವಾಗತ ಇತ್ಯಾದಿ ಕಾರ್ಯಕ್ರಮಗಳಿಂದಾಗಿ ತವರು ಜಿಲ್ಲೆಗೆ ಬರಲಾಗಿಲ್ಲ.
ಜೂ. 3 ರಂದು ಮಧು ಬಂಗಾರಪ್ಪ ಅವರು ಬೆಳಗ್ಗೆ 10 ಗಂಟೆಗೆ ನಗರಕ್ಕೆ ಭೇಟಿ ನೀಡಲಿದ್ದು, ಎಂ.ಆರ್.ಎಸ್. ಸರ್ಕಲ್‌ನಿಂದ ಬೈಕ್ ರ್‍ಯಾಲಿ ಮೂಲಕ ಅವರನ್ನು ಬರಮಾಡಿಕೊಳ್ಳಲಾಗುವುದು. ಬಳಿಕ ಶಿವಮೊಗ್ಗದ ಲಗನ ಮಂದಿರದಲ್ಲಿ 11 ಗಂಟೆಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಹಾಗೂ ಮಧು ಬಂಗಾರಪ್ಪ ಬೆಂಬಲಿಗರು ಸಚಿವರನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ಸ್ಥಳೀಯ ನಾಯಕರುಗಳು ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ.

Ad Widget

Related posts

ಮುಸ್ಲಿಮರಿಗೆ  ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು

Malenadu Mirror Desk

ಬದುಕಲು ಮೊದಲು ವ್ಯವಸ್ಥೆಮಾಡಿ, ಆಮೇಲೆ ಚಿತಾಗಾರದ ಬಗ್ಗೆ ಯೋಚಿಸಿ

Malenadu Mirror Desk

ಕುವೆಂಪು ವಿವಿ ಘಟಿಕೋತ್ಸವ, ಪದ್ಮಭೂಷಣ ಡಾ.ಸುರೇಶ್ ಬಿ.ಎನ್ ಅವರಿಂದ ಘಟಿಕೋತ್ಸವ ಭಾಷಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.