Malenadu Mitra
ರಾಜ್ಯಶಿವಮೊಗ್ಗ

ಬಾರ್ ಕ್ಯಾಶಿಯರ್ ಕೊಲೆ ಆರೋಪಿಗೆ ಕಾಲಿಗೆ ಗುಂಡು, ಬಂಧನ

ಶಿವಮೊಗ್ಗ ತಾಲೂಕು ಆಯನೂರಿನ ನವರತ್ನ ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಆರೋಪಿಗಳಲ್ಲಿ ಒಬ್ಬನನ್ನು ಕುಂಸಿಪೋಲಿಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಕ್ಯಾಶಿಯರ್ ಸತೀಶ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗಳನ್ನು ಅಶೋಕ್ ನಾಯ್ಕ, ನಿರಂಜನ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಮತ್ತೊಬ್ಬ ಆರೋಪಿಯನ್ನು ಬಂಧಿಸಲು ಹೋದ ಸಂದರ್ಭ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಕೇಳಲಿಲ್ಲ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದ ಸತೀಶ್‌ನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು.

ಅವಧಿ ಮೀರಿದರೂ ಬಾರ್‌ನಲ್ಲಿ ಮದ್ಯಸೇವನೆ ಮಾಡುತ್ತಿದ್ದಾಗ, ಕ್ಯಾಶಿಯರ್ ಬಾಗಿಲು ಹಾಕಬೇಕು ಹೊರಡಿ ಎಂದು ಹೇಳಿದಾಗ, ಆರೋಪಿಗಳು ಸಚಿನ್ ಮೇಲೆ ಹಲ್ಲೆ ನಡೆಸಿದ್ದರು. 112 ಗೆ ದೂರವಾಣಿ ಕರೆ ಮಾಡಿ ಪೊಲೀಸರನ್ನು ಕರೆಸಿದ್ದರೂ ಅವರ ಸಮ್ಮುಖದಲ್ಲಿಯೇ ಆರೋಪಿಗಳು ಸಚಿನ್‌ಗೆ ಚಾಕುವಿನಿಂದ ಇರಿದಿದ್ದರು. ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಶಿವಮೊಗ್ಗ ಆಸ್ಪತ್ರೆಗೆ ಕರೆತಂದರೂ ತೀವ್ರ ರಕ್ತಶ್ರಾವವಾಗಿದ್ದರಿಂದ ಸಚಿನ್ ಸಾವುಕಂಡಿದ್ದರು.ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಪುನಾರಂಭ

Malenadu Mirror Desk

ಬೇಲಿಕಳ್ಳಿ ಬೀಜ ತಿಂದ 12 ಮಕ್ಕಳು ಅಸ್ವಸ್ಥ

Malenadu Mirror Desk

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆಸಿಗ್ಮಾ ಅಕಾಡೆಮಿ ಆಫ್ ಫೋಟೊಗ್ರಾಫಿಯಿಂದ 3 ರಾಷ್ಟ್ರೀಯ ಪ್ರಶಸ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.