Malenadu Mitra
ರಾಜ್ಯಶಿವಮೊಗ್ಗ

ಸಕ್ರೆಬೈಲ್ ಸಮೀಪ ಅಪಘಾತ: ಸಾವು

ಶಿವಮೊಗ್ಗ : ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತಿದ್ದ ಕಾರಿಗೆ ತೀರ್ಥಹಳ್ಳಿಯಿಂದ ಬರುತಿದ್ದ ಬಸ್ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರ ಪೈಕಿ ಒಬ್ಬರು ಅಸುನೀಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.ಇವರು ಶಿವಮೊಗ್ಗದ ಮಾನಸಿಕ ಆಸ್ಪತ್ರೆಯೊಂದಕ್ಕೆ ಬಂದು ಚಿಕಿತ್ಸೆ ಪಡೆದು ಮರಳುತ್ತಿದ್ದರು ಎನ್ನಲಾಗಿದೆ.
ನುಜ್ಜುಗುಜ್ಜಾದ ಕಾರು
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಜು ಪುಡಿಯಾಗಿದೆ. ಇಂಜಿನ್ ಹೊರತು ಕಾರಿನ ಬಾನೆಟ್ ಸೇರಿದಂತೆ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಕಾರಿನ ಗುರುತು ಸಿಗದಂತಾಗಿದೆ.

Ad Widget

Related posts

ಸಮಗ್ರ ಅಭಿವೃದ್ಧಿಗೆ ನನ್ನ ಜತೆಗೆ ಅಧಿಕಾರಿಗಳು ಕೈಜೋಡಿಸಬೇಕು: ಮಧು ಬಂಗಾರಪ್ಪ

Malenadu Mirror Desk

ಸಿಎಂ ನಾಗರಿಕ ಸನ್ಮಾನಕ್ಕೆ ವಿವಿಧ ಸಂಘಟನೆಗಳ ಸಾಥ್

Malenadu Mirror Desk

ಕ್ರೀಡೆಯಿಂ ಮಕ್ಕಳ ಆರೋಗ್ಯ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.