Malenadu Mitra
ರಾಜ್ಯಶಿವಮೊಗ್ಗ

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಸಸ್ಯ ಶಾಮಲ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಸ್ನೇಹಲ್ ಸುಧಾಕರ್ ಹೇಳಿಕೆ

ಶಿವಮೊಗ್ಗ: ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಿದೆ ಎಂದು ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗಾಡಿಕೊಪ್ಪದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಸ್ಯ ಶ್ಯಾಮಲ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಹೆಚ್ಚು ಅರಣ್ಯ ನಾಶವಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಅರಣ್ಯ ನಾಶವಾದಷ್ಟು ಪರಿಸರದ ಮೇಲೆ ಹೆಚ್ಚಿನ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಗಿಡ-ಮರಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕಿದೆ. ಇದು ನಮ್ಮೆಲ್ಲರ ಜವಾಬ್ದಾರಿ ಮತ್ತು ಇಂದಿನ ತುರ್ತಾಗಿದೆ. ಪರಿಸರ ಸಂರಕ್ಷಣೆ ವಿಷಯದಲ್ಲಿ ವಿದ್ಯಾರ್ಥಿಗಳಾದ ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಪ್ರತಿ ಮಕ್ಕಳು ತಮ್ಮ ಮನೆಗಳು ಮತ್ತು ಶಾಲೆಗಳಲ್ಲಿ ಒಂದಾದರೂ ಗಿಡ ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.
ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಶಾಲಾ ಮಕ್ಕಳ ಹಾಜರಾತಿ ಹಾಗೂ ಸ್ಥಳಾವಕಾಶ ಆಧರಿಸಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ೧೮,೭೧೮ ಮತ್ತು ಪ್ರೌಢಶಾಲೆ ಮಕ್ಕಳಿಗೆ ೫,೫೬೬ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೨೪,೨೮೪ ಸಸಿಗಳನ್ನು ಆಯ್ದ ಶಾಲೆಗಳಲ್ಲಿ ನೆಡಲಾಗುವುದು. ಮಕ್ಕಳು ಪರಿಸರದ ಕುರಿತು ಹೆಚ್ಚು ಜಾಗೃತರಾಗಬೇಕು. ಗಿಡಗಳನ್ನು ನೆಟ್ಟ ನಂತರ ಒಂದು ಗಿಡಕ್ಕೆ ವಾರಕ್ಕೆ ೧೦ ಲೀ ನೀರನ್ನು ಹಾಕಬೇಕು. ಗಿಡಗಳನ್ನು ನೆಟ್ಟ ನಂತರ ಉಸ್ತುವಾರಿಗಾಗಿ ಮಕ್ಕಳಿಗೆ ಗಿಡಗಳನ್ನು ಹಂಚಿಕೆ ಮಾಡಲಾಗುವುದು. ಸತತ ೩ ವರ್ಷಗಳ ಕಾಲ ಮಕ್ಕಳು ಗಿಡಗಳಿಗೆ ನೀರೆರೆದು ಪೋಷಿಸಬೇಕು. ಚೆನ್ನಾಗಿ ಗಿಡ ಬೆಳೆಸಿದ ಮಕ್ಕಳಿಗೆ ಶಾಲೆಯಲ್ಲಿ ಬಹುಮಾನ ನೀಡಲಾಗುವುದು ಎಂದರು.

ಬಿಇಒ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ ೫೦ ಲಕ್ಷ ಸಸಿಗಳನ್ನು ನೆಡುವ ಸರ್ಕಾರದ ವಿನೂತನ ಕಾರ್ಯಕ್ರಮ ‘ಸಸ್ಯ ಶ್ಯಾಮಲ’ ಕ್ಕೆ ಇಂದು ರಾಜ್ಯಾದ್ಯಂತ ಚಾಲನೆ ದೊರೆತಿದೆ. ಸೆ.೧೧ ರಿಂದ ೧೫ ರವರೆಗೆ ೫ ದಿನಗಳ ಕಾಲ ಈ ಕಾರ್ಯಕ್ರಮವು ಶಾಲೆಗಳು ಮತ್ತು ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದರು.

ಈ ಸಂದರ್ಭ ಗಾಡಿಕೊಪ್ಪದ ಶಾಲೆಯ ಆವರಣದಲ್ಲಿ ಗಣ್ಯರು ವಿವಿಧ ಗಿಡಗಳನ್ನು ನೆಟ್ಟು ನೀರೆರೆದರು. ಅರಣ್ಯ ಇಲಾಖೆಯ ಆರ್ ಎಫ್‌ಒ ಪ್ರದೀಪ್ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ್, ಶಾಲಾ ಮುಖ್ಯೋಪಾಧ್ಯಾಯಿನಿ ಭುವನೇಶ್ವರಿ, ಡಿಡಿಪಿಐ ಕಚೇರಿ ತಾಂತ್ರಿಕ ಸಹಾಯಕಿ ಲಕ್ಷ್ಮಿ ಹೆಚ್ ಸಿ, ಸಿಆರ್‍ಪಿ ಶೈಲಶ್ರೀ ಮತ್ತಿತರರು ಹಾಜರಿದ್ದರು.

ಶಾಲಾ ಮಕ್ಕಳ ಹಾಜರಾತಿ ಹಾಗೂ ಸ್ಥಳಾವಕಾಶ ಆಧರಿಸಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 18718 ಮತ್ತು ಪ್ರೌಢಶಾಲೆ ಮಕ್ಕಳಿಗೆ 5566ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24284 ಸಸಿಗಳನ್ನು ಆಯ್ದ ಶಾಲೆಗಳಲ್ಲಿ ನೆಡಲಾಗುವುದು. ಮಕ್ಕಳು ಪರಿಸರದ ಕುರಿತು ಹೆಚ್ಚು ಜಾಗೃತರಾಗಬೇಕು.

ಸಿ.ಆರ್.ಪರಮೇಶ್ವರಪ್ಪ, ಡಿಡಿಪಿಐ, ಶಿವಮೊಗ್ಗ

Ad Widget

Related posts

ಶಿವಮೊಗ್ಗದಲ್ಲಿ 17 ಸಾವು, 922ಮಂದಿ ಡಿಸ್ಚಾರ್ಜ್

Malenadu Mirror Desk

ಮೇ 30ರಿಂದ ಬೆಂಗಳೂರಿನಲ್ಲಿ 3 ದಿನಗಳ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ : ಸಿ.ಎಸ್.ಷಡಾಕ್ಷರಿ

Malenadu Mirror Desk

ಡಾ. ಅರವಿಂದ್ ಎಸ್.ಟಿ. ಅವರಿಗೆ ‘ಡಾ. ಎಸ್.ಎಸ್. ಜಯರಾಮ್’ ಪ್ರಶಸ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.