Malenadu Mitra
ರಾಜ್ಯಶಿವಮೊಗ್ಗ

ಆನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

ಶಿವಮೊಗ್ಗ ತಾಲೂಕು ಪುರದಾಳು ಗ್ರಾಮಪಂಚಾಯಿತಿ ಆಲದೇವರ ಹೊಸೂರಿನಲ್ಲಿ ಕಾಡಾನೆ ತುಳಿದು ಹನುಮಂತ (50) ಸಾವುಗೀಡಾಗಿದ್ದಾರೆ.

ಶನಿವಾರ ಸಂಜೆ 6.30 ರ ಸಮಯದಲ್ಲಿ ಪುರದಾಳು ಗ್ರಾಮದಿಂದ ಆಲದೇವರ ಹೊಸೂರಿಗೆ ಬರುತಿದ್ದ ಹನುಮಂತ ಅವರಿಗೆ ಆನೆ ಎದುರಾಗಿದೆ. ತಕ್ಷಣ ಬೆನ್ನತ್ತಿದ ಆನೆ ಕ್ಷಣಮಾತಗರದಲ್ಲಿ ತುಳಿದ ಸಾಯಿಸಿದೆ.

ಹಾವೇರಿ ಮೂಲದ ಹನುಮಂತಪ್ಪ ಕುಟುಂಬ ಶ್ರೀಧರ್ ಎನ್ನುವವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತಿದ್ದರು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದರು.

ಪುರದಾಳು ಗ್ರಾಮದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು,ರೈತರ ಬೆಳೆ ಹಾನಿ ನಿರಂತರವಾಗಿದೆ. ಆಲದೇವರ ಹೊಸೂರು ಸಮೀಪ ಕಾಡಾನೆಗಳು ಮತ್ತ್ತೆ ಮತ್ತೆ ದಾಳಿ ಮಾಡುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

Ad Widget

Related posts

ಡ್ರಗ್ಸ್ ಹಾಗೂ ಮೂಲಭೂತವಾದದಿಂದಾಗಿ ಶಿವಮೊಗ್ಗದಲ್ಲಿ ಭೀತಿ ಹುಟ್ಟಿಸುವ ಕೆಲಸ ,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರಿಕೃಷ್ಣ ಆರೋಪ

Malenadu Mirror Desk

ಕೋಡಿಹಳ್ಳಿ ಚಂದ್ರಶೇಖರ್ ವಜಾ, ನೂತನ ಅಧ್ಯಕ್ಷರಾಗಿ ಬಸವರಾಜಪ್ಪ

Malenadu Mirror Desk

ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.