Malenadu Mitra
Uncategorized

ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ.

ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ನೇಮನಾಯ್ಕ್, ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿದ್ದರು. ಜೊತೆಗೆ ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗ ಭಾಧಿಸಿದ್ದರಿಂದ ಬೇಸತ್ತು, ನಿನ್ನೆ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರೈತ ನೇಮನಾಯ್ಕ್ ಸಾವನ್ನಪ್ಪಿದ್ದಾರೆ.

ರೈತ ಆತ್ಮಹತ್ಯೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಬಜೆಟ್ನಲ್ಲಿ ಅನುದಾನ ಮೀಸಲಿಡಿ

Malenadu Mirror Desk

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ :ನೂತನ ಮಾರ್ಗದಲ್ಲಿ ಸ್ಪೈಸ್‌ ಜೆಟ್‌ ಸಂಚಾರ

Malenadu Mirror Desk

ಹಾಲಪ್ಪ- ಬೇಳೂರು ನಡುವೆ ತೀವ್ರ ಹಣಾಹಣಿ,
ಬಂಗಾರಪ್ಪ ಶಿಷ್ಯರ ನಡುವೆ ಕಾಗೋಡು ಭೀಷ್ಮನಿದ್ದಂತೆ, ಇಬ್ಬರೂ ಗೆಲ್ಲುವವರೇ ಆದ್ರೆ ಸೋಲುವವರಾರು ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.