Malenadu Mitra
Uncategorized

ಬೆಳ್ಳಂಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿ: ಹಲವರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಪಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.
ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗೊಂಡಿದ್ದಾರೆ. ಬಸ್ ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಬಸ್ ಚಲಾಯಿಸಿ, ಹಂಪ್ ಹಾರಿಸಿದ ಪರಿಣಾಮ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಬ್ಬಿಣದ ಫೆನ್ಸಿಂಗ್ ದಾಟಿ, ಚರಂಡಿಗೆ ಬಸ್ ಬಿದ್ದಿದೆ.
ಇಬ್ಬರಿಗೆ ತೀವ್ರ ಗಾಯ- ಗಾಯಾಳುಗಳು ಮೆಗ್ಗಾನ್ ಗೆ ಶಿಫ್ಟ್:


ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ಹೊರಟಿದ್ದ ಸಿಟಿ ಬಸ್ ನಲ್ಲಿ ಸುಮಾರು 20 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಎಲ್ಲಾ 6 ಜನ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Related posts

ಬಿಜೆಪಿಯಿಂದ ಶ್ರೀಮಂತರ ಓಲೈಕೆ: ತೀರ್ಥಹಳ್ಳಿಯಲ್ಲಿ ಕಿಮ್ಮ‌ನೆ ರತ್ನಾಕರ ಹೇಳಿಕೆ

Malenadu Mirror Desk

ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಕೋರಿಕೆ

Malenadu Mirror Desk

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.