Malenadu Mitra
ಸಾಗರ

ಶಾಲಾ ಆವರಣದಲ್ಲೇ ಕುಸಿದು ಬಿದ್ದು, ಶಿಕ್ಷಕ ಸಾವು

ಶಿವಮೊಗ್ಗ: ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಭೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ ಮೃತ ದುರ್ದೈವಿ.
ಶಿಕ್ಷಕ ಗಜಾನನ ಹಿರೇಮಠ ಅವರು ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆಗಳ ಬಗ್ಗೆ ತರಬೇತಿ ನೀಡುತ್ತಿದ್ದರು. ಇಂದು ಕೂಡ ಶಿಕ್ಷಕ ಗಜಾನನ ಹಿರೇಮಠ ಅವರು ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಗಜಾನನ ಹೀರೆಮಠ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಮಾರ್ಗಮಧ್ಯದಲ್ಲಿ ಅವರು ಅಸುನೀಗಿದ್ದಾರೆ. ಮೃತ ಶಿಕ್ಷಕ ಗಜಾನನ ಹೀರೆಮಠ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.

ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ.ಈ., ಮಲೆನಾಡು ಅಭಿವೃದ್ದಿ ಪ್ರತಿಷ್ಟಾನದ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

Ad Widget

Related posts

ನ್ಯಾಯಯುತ ಹಕ್ಕುಗಳನ್ನು ಪಡೆಯಲು ಈಡಿಗ ಸಮಾಜ ಸಂಘಟಿತವಾಗಬೇಕು, ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಗುರೂಜಿ ಅಭಿಮತ

Malenadu Mirror Desk

ಶರಾವತಿ ಸಂತ್ರಸ್ತರ ಬದುಕಿನೊಂದಿಗೆ ಸರಕಾರ ಚೆಲ್ಲಾಟ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪ

Malenadu Mirror Desk

ಸಿಗಂದೂರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಖ್ಯಾತಾನಂದ ಶ್ರೀಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.