Malenadu Mitra
ಭಧ್ರಾವತಿಶಿವಮೊಗ್ಗ

ಭದ್ರಾವತಿಯಲ್ಲಿ ಕರಡಿ ಭೀಕರ ದಾಳಿ- ಗಾಯಾಳು ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ : ಕೂಲಿ ಕೆಲಸ ಮುಗಿಸಿಕೊಂಡು, ಮನೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ಭೀಕರವಾಗಿ ದಾಳಿ‌ ಮಾಡಿದೆ.
ಭದ್ರಾವತಿ ತಾಲೂಕಿನ ಅಂತರಗಂಗೆ ಸಮೀಪದ ಬಿಸಿಲಮನೆ ಗ್ರಾಮದ ಬಳಿ ಸಂಜೆ ಘಟನೆ ನಡೆದಿದ್ದು, ಕರಡಿ ದಾಳಿಯಲ್ಲಿ ಕೆ.ಹೆಚ್.ನಗರದ ನಿವಾಸಿ ದೇವೇಂದ್ರಪ್ಪ(55) ಗಂಭೀರ ಗಾಯಗೊಂಡಿದ್ದಾರೆ.
ಕೂಲಿ ಕೆಲಸ ಮುಗಿಸಿ, ಮನೆಗೆ ತೆರಳುತ್ತಿದ್ದ ದೇವೇಂದ್ರಪ್ಪ ಮೇಲೆ ಕರಡಿ ಏಕಾಏಕಿ ದಾಳಿ ಮಾಡಿದೆ. ತಲೆ, ಮುಖ, ಕೈ ಹಾಗೂ ಹೊಟ್ಟೆ ಭಾಗದಲ್ಲಿ ಕರಡಿ ಪರಚಿದ್ದು, ತೀವ್ರ ರಕ್ತಸ್ರಾವವಾಗಿದ್ದ ದೇವೇಂದ್ರಪ್ಪರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕರಡಿ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿ- ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ದಾಳಿ ಮಾಡಿದ ಕರಡಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Ad Widget

Related posts

ಕೆಲಸಕ್ಕೆ ಬಾರದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ: ಸಿಮ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರಪ್ಪ ಸಿಡಿಮಿಡಿ

Malenadu Mirror Desk

ಶಿವಮೊಗ್ಗದಲ್ಲಿ 1 ಸಾವು, 518 ಮಂದಿಗೆ ಸೋಂಕು

Malenadu Mirror Desk

ಅಸಂಬದ್ಧ ಆಸ್ತಿ ತೆರಿಗೆ:ಮಹಾನಗರಪಾಲಿಕೆಗೆ ಮುತ್ತಿಗೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.