Malenadu Mitra
ಶಿವಮೊಗ್ಗ

ಸೂಡೂರು ಗೇಟ್ ಬಳಿ ಅಪಘಾತ : ಯುವಕ ಸಾವು

ಶಿವಮೊಗ್ಗ: ತಾಲೂಕಿನ ಸೂಡೂರು ಗೇಟ್ ಬಳಿಯಿರುವ ದೇವಸ್ಥಾನದ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಕಳಸ ಗ್ರಾಮದ ಮನೋಜ್ (19) ಮೃತಪಟ್ಟ ದುರ್ಧೈವಿ.
ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಗಾಯಗೊಂಡಿದ್ದರು. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದರೇ, ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು ಸ್ಥಿತಿ ಗಂಭೀರವಾಗಿದೆ.
ರಿಪ್ಪನ್‌ಪೇಟೆಯ ಯುವಕ ಮನ್ವಿತ್ ಭಂಡಾರಿಗೆ ಸಹ ಗಾಯವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ದೀಪಾವಳಿಯ ವಿಶೇಷ : ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

Malenadu Mirror Desk

ಹಸೆ ಚಿತ್ತಾರವನ್ನು ಪಠ್ಯಕ್ರಮದಲ್ಲಿ ಸೇರಿಸಲು ಕ್ರಮ: ಸಚಿವ ಮಧು ಬಂಗಾರಪ್ಪ

Malenadu Mirror Desk

ನಮ್ಮ ಹಾಡು, ನಮ್ಮ ಹಸೆ, ಜನಮನ ಸೆಳೆದ ದೀವರ ಸಾಂಸ್ಕೃತಿಕ ವೈಭವ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.