Malenadu Mitra
ರಾಜ್ಯಶಿವಮೊಗ್ಗ

ಹ್ಯಾಟ್ರಿಕ್ ಹಿರೋ ಗೆ ಶಸ್ತ್ರಚಿಕಿತ್ಸೆ: ಶ್ರೀಕಾಂತ್ ಅಭಿಮಾನಿ ಬಳಗದಿಂದ ವಿಶೇಷ ಪೂಜೆ

ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಿದ್ದು, ಬೇಗನೆ ಗುಣಮುಖರಾಗಿ ಕರುನಾಡಿಗೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಬಸವರಾಜ್, ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.

Ad Widget

Related posts

ಡಿನೋಟಿಫಿಕೇಷನ್‌ಗೆ ಸಿಗಲಿಲ್ಲ ಕೇಂದ್ರದ ಸಮ್ಮತಿ
ಶರಾವತಿ ಸಂತ್ರಸ್ಥರಿಗೆ ಕೇಂದ್ರದ ಬರೆ: ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಕನಸು ನುಚ್ಚು ನೂರು

Malenadu Mirror Desk

ರೋಗಿಗಳನ್ನು ಅಕ್ಕರೆಯಿಂದ ಆರೈಕೆ ಮಾಡುತ್ತಿದ್ದ ನರ್ಸ್ ಮೇಲೆ ಕ್ರೂರ ವಿಧಿಯ ಸವಾರಿ, ಎದೆಯೊಡೆವ ದುಃಖದಲ್ಲಿಯೂ ಅಂಗಾಂಗ ದಾನ ಮಾಡಿದ ಗಾನವಿ ಕುಟುಂಬ

Malenadu Mirror Desk

ಯತ್ನಾಳ್ ಗಿಣಿ ಶಾಸ್ತ್ರಕ್ಕೆ ಅವರ ಪಕ್ಷದಲ್ಲೇ ಮನ್ನಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.