Malenadu Mitra
ಜಿಲ್ಲೆಶಿವಮೊಗ್ಗಸೊರಬ

ಲೋಕಾಯುಕ್ತ ದಾಳಿ: ಪಿಡಿಓ ಈಶ್ವರಪ್ಪ ಅರೆಸ್ಟ್

ಶಿವಮೊಗ್ಗ: ಇ-ಖಾತೆ ಮಾಡಿಕೊಡಲು 5 ಸಾವಿರ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾ.ಪಂ ನ ಪ್ರಭಾರ ಪಿಡಿಓ ಈಶ್ವರಪ್ಪರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣ ಸಹಿತ ವಶಕ್ಕೆ ಪಡೆದಿದ್ದಾರೆ.
ಸೊರಬ ತಾಲೂಕಿನ ಇಂಡುವಳ್ಳಿಯ ಮಹಮ್ಮದ್ ಗೌಸ್ ಎಂಬುವರ ದೂರಿನ ಮೇರೆಗೆ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಹಮ್ಮದ್ ಗೌಸ್ ರ ತಂದೆ ಭಾಷಾ ಸಾಬ್‌ ಅವರು ಇಂಡುವಳ್ಳಿ ಗ್ರಾಮದ ಜಮೀನಿನಲ್ಲೇ ಮನೆ ಮಾಡಿಕೊಂಡು, ವಾಸವಿದ್ದಾರೆ. ಆ ಮನೆಯ ಮೇಲೆ ಲೋನ್ ತೆಗೆದುಕೊಳ್ಳುವ ಸಂಬಂಧ ಮನೆ ಇರುವ ಜಾಗವನ್ನು ತನ್ನ ತಾಯಿಯ ಹೆಸರಿಗೆ ಈ-ಖಾತಾ ಮಾಡಿಕೊಡಲು ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಇಂಡುವಳ್ಳಿ ಗ್ರಾಮದ ಪ್ರಭಾರ ಪಿಡಿಓ ಈಶ್ವರಪ್ಪ ಅವರು ಮನೆ ಜಾಗಕ್ಕೆ ಬಂದು, ಅಳತೆ ಮಾಡಿಕೊಂಡು ಸಹ ಹೋಗಿದ್ದರು. ಆದರೆ, ಈ-ಖಾತಾ ಕೊಡುವಂತೆ ಹಲವು ಬಾರಿ ಕೇಳಿದ್ದರೂ, ಈ ಖಾತೆ ಕೊಡದೇ ಈಶ್ವರಪ್ಪ ಸತಾಯಿಸಿದ್ದರಲ್ಲದೇ, ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಅದರಂತೆ ಇಂದು ಬೆಳಿಗ್ಗೆ ಸೊರಬದ ಪೋಸ್ಟ್ ಆಫೀಸ್ ಕಛೇರಿ ಬಳಿ 5 ಸಾವಿರ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಓ ಈಶ್ವರಪ್ಪರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
ಲೋಕಾಯುಕ್ತ ಶಿವಮೊಗ್ಗ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ನೇತೃತ್ವದಲ್ಲಿ ದಾಳಿ ಕೈಗೊಳ್ಳಲಾಗಿತ್ತು.

Ad Widget

Related posts

ಶಿವಮೊಗ್ಗದಲ್ಲಿ 1024 ಮಂದಿ ಡಿಸ್ಚಾರ್ಜ್ 8 ಸಾವು

Malenadu Mirror Desk

ಅಸಂಬದ್ಧ ಆಸ್ತಿ ತೆರಿಗೆ:ಮಹಾನಗರಪಾಲಿಕೆಗೆ ಮುತ್ತಿಗೆ

Malenadu Mirror Desk

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.