Malenadu Mitra
ಜಿಲ್ಲೆಹೊಸನಗರ

ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಟಿಟಿ ಢಿಕ್ಕಿ- ಹಲವರಿಗೆ ಗಾಯ

ಶಿವಮೊಗ್ಗ:ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.


ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Related posts

ಫೆಂಗಲ್ ಎಫೆಕ್ಟ್ : ಅಡಕೆ, ಮೆಕ್ಕೆಜೋಳ, ಭತ್ತದ ಕೊಯ್ಲಿಗೆ ಕುತ್ತು

Malenadu Mirror Desk

ಲಾರಿ ಡಿಕ್ಕಿ- ಚಿಕ್ಕಜೇನಿಯಲ್ಲಿ ಖಾಸಗಿ ಬಸ್ ಪಲ್ಟಿ- ಹಲವರಿಗೆ ಗಾಯ

Malenadu Mirror Desk

ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು, ತೋಟ-ಗದ್ದೆ ಜಲಾವೃತ.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.