Malenadu Mitra
ಹೊಸನಗರ

ಹಿಟ್ & ರನ್ : ಬೈಕ್ ಸವಾರ ಸಾವು

ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ(65) ಮೃತ ದುರ್ದೈವಿ.
ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬೆಳಿಗ್ಗೆ ಮನೆಯಿಂದ ರಿಪ್ಪನ್ ಪೇಟೆಗೆ ಹೋಗುತ್ತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಸಂಜೀವ್ ಅವರನ್ನು ಅದೇ ಮಾರ್ಗವಾಗಿ ಬರುತ್ತಿದ್ದ ಪಿಎಸ್ಐ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಂಬ್ಯುಲೆನ್ಸ್ ಗೆ ಶಿಫ್ಟ್ ಮಾಡುವ ವೇಳೆ ಸಂಜೀವ್ ಮೃತಪಟ್ಟಿದ್ದಾರೆ.
ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ

Malenadu Mirror Desk

ಮಲೆನಾಡಿನಾದ್ಯಂತ ಶ್ರದ್ದಾಭಕ್ತಿಯ ಭೂಮಿ ಹುಣ್ಣಿಮೆ ಹಬ್ಬ , ಗರ್ಭವತಿ ಭೂ ತಾಯಿಯ ಬಯಕೆ ತೀರಿಸಿದ ರೈತ ಸಮುದಾಯ

Malenadu Mirror Desk

ಅನ್ನಕೊಡುವ ಭೂತಾಯಿಯ ಬಯಕೆ ತೀರಿಸುವ ಹಬ್ಬ ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.