Malenadu Mitra
ಜಿಲ್ಲೆಶಿವಮೊಗ್ಗಸಾಗರ

ಆನಂದಪುರ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಆನಂದಪುರ ಸಮೀಪ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಮುರುಘಾಮಠ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಬಸ್ಸು ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಾಥಮಿಕ ಮಾಹಿತಿಯನುಸಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರು ಎನ್ನಲಾಗಿದೆ.
ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹಾಗೂ ಎರ್ಟಿಗಾ ಕಾರು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಮುರುಘಾಮಠ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Related posts

ಉದ್ಯೋಗ, ಕೈಗಾರಿಕೆ ಸ್ಥಾಪನೆ, ಸೌಹಾರ್ದತೆ ನನ್ನ ಆದ್ಯತೆ, ಪತ್ರಿಕಾ ಸಂವಾದದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ

Malenadu Mirror Desk

ಜಿಲ್ಲೆಗೆ 8500 ಕೋಟಿ ರೂ.ಯೋಜನೆ : ಸಂಸದ

Malenadu Mirror Desk

ಕುವೆಂಪುರವರನ್ನು ಅವಮಾನಿಸಿದ ಪ್ರಕರಣ ಖಂಡಿಸಿ,ಜೂ.15 ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.