Malenadu Mitra
ಶಿವಮೊಗ್ಗ

ಅನುಪಿನಕಟ್ಟೆಯಲ್ಲಿ ಅಣ್ಣನಿಂದಲೇ ತಮ್ಮನ ಭೀಕರ ಕೊಲೆ

ಶಿವಮೊಗ್ಗ: ಅಣ್ಣನೇ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಗಿರೀಶ್(30) ಕೊಲೆಯಾದ ತಮ್ಮ.
ಇಂದು ಬೆಳಿಗ್ಗೆ ಅಣ್ಣ ಲೋಕೇಶ್ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದು, ತೀವ್ರ ರಕ್ತಸ್ರಾವದಿಂದ ತಮ್ಮ ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಆರೋಪಿ ಲೋಕೇಶ್ ನನ್ನ ವಶಕ್ಕೆ ಪಡೆದಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯನ್ನ ಮುಂದುವರೆಸಿದ್ದಾರೆ.

Ad Widget

Related posts

ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ: ಶೋಭಾಯಾತ್ರೆ

Malenadu Mirror Desk

ಜನತೆ ವೈಚಾರಿಕತೆ ಮೈಗೂಡಿಸಿಕೊಳ್ಳಬೇಕು :ಡಾ.ಮಹಾಂತ ಸ್ವಾಮೀಜಿ

Malenadu Mirror Desk

ಕೆ.ಇ.ಕಾಂತೇಶ್ ಬಿರುಸಿನ ಪ್ರಚಾರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.