Malenadu Mitra
ಜಿಲ್ಲೆಶಿವಮೊಗ್ಗ

ಸಕ್ರೇಬೈಲು ಬಳಿ ತುಂಗಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆ

ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ.
ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ.
ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ದುರಾಡಳಿತ ಮಾಡಿದ ಸೊರಬ ಶಾಸಕರನ್ನು ಸೋಲಿಸಿ: ಮಧುಬಂಗಾರಪ್ಪ ಕರೆ

Malenadu Mirror Desk

ಗೋಮಾಳ, ಕಂದಾಯ ಭೂಮಿಯಲ್ಲಿ ಈಚಲು,ತೆಂಗು, ತಾಳೆ ಮರನೆಡಿ, ಈಡಿಗ ಸಮುದಾಯಕ್ಕೆ ಶಿವಮೊಗ್ಗದಲ್ಲಿ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಹೇಳಿಕೆ

Malenadu Mirror Desk

ಸಿಗಂದೂರು ದೇಗುಲ ಮುಜರಾಯಿಗೆ ಬೇಡ: ಈಡಿಗರ ಸಂಘದಿಂದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.