Malenadu Mitra
ಜಿಲ್ಲೆಶಿವಮೊಗ್ಗ

ಸಕ್ರೇಬೈಲು ಬಳಿ ತುಂಗಾ ಹಿನ್ನೀರಿನಲ್ಲಿ ಮೂವರ ಶವ ಪತ್ತೆ

ಶಿವಮೊಗ್ಗ: ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಮೂವರ ಶವ ಪತ್ತೆಯಾಗಿವೆ.
ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ.
ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಗ್ರಾಮ ವಾಸ್ತವ್ಯದಲ್ಲಿ ಗಾಜನೂರು ಗ್ರಾಮದ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Malenadu Mirror Desk

ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ: ಪೂಜಾರಿ ಆರೋಪ

Malenadu Mirror Desk

ಬಿಜೆಪಿ ಎಂದರೆ ಕ್ರಿಯಾಶೀಲತೆ ಎಂದ ಗೃಹ ಸಚಿವ ಆರಗಜ್ಞಾನೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.