Malenadu Mitra
ರಾಜ್ಯಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘದ ಸರ್ವಸದಸ್ಯರ ಸಭೆ

ರಾಜ್ಯ ಸರಕಾರಿ ನೌಕರರ ಸೌಹಾರ್ದ ಸಹಕಾರಿ ಸಂಸ್ಥೆ ಹಾಗೂ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ ಡಿ.೨೫ ರಂದು ಶಿವಮೊಗ್ಗ ಕುವೆಂಪು ರಂಗಮAದಿರಲ್ಲಿ ನಡೆಯಲಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು, ನೌಕರರ ಸನ್ಮಾನ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಹಾಗೂ ಎಸ್ಪಿ ಶಾಂತರಾಜ್ ಮತ್ತಿತರರು ಭಾಗವಹಿಸುವರು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ನೌಕರರ ಸಂಘದ ಹಿರಿಯರು ಹಾಗೂ ಸಾಧಕರನ್ನು ಅಭನಂದಿಸಲಾಗುವುದು ಎಂದು ಅವರು ಹೇಳಿದರು.

Ad Widget

Related posts

ಮಕ್ಕಳಿಗೆ ಸಂಬಂಧಗಳ ಮೌಲ್ಯ ತಿಳಿಸಬೇಕು: ಡಾ.ಮೋಹನ್ ಚಂದ್ರಗುತ್ತಿ , ಮಳೀಮಠ್ ನಾರಾಯಣ ನಾಯ್ಕರಿಗೆ ಸಕಾಲಿಕ ಶ್ರದ್ಧಾಂಜಲಿ ಕಾರ್ಯಕ್ರಮ

Malenadu Mirror Desk

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ : ಕೆ.ಎಸ್.ಈಶ್ವರಪ್ಪ

Malenadu Mirror Desk

ಕೋವಿಡ್ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ವಿಫಲ:ಕಂಕಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.