Malenadu Mitra
ರಾಜ್ಯಶಿವಮೊಗ್ಗ

ಕೆ.ಇ.ಕಾಂತೇಶ್ ಬಿರುಸಿನ ಪ್ರಚಾರ

ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.
ಗೊಂದಿ ಚಟ್ನಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ತಮ್ಮ ಪಕ್ಷದ ಅಭ್ಯರ್ಥಿಗಳೊಂದಿಗೆ ಮನೆಮನೆಗೆ ತೆರಳಿ ಮತಚಲಾಯಿಸುವಂತೆ ಕೇಳಿಕೊಂಡರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೆಲಸವನ್ನು ನೋಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ. ಅವರು ನಿಮ್ಮ ಗ್ರಾಮದ ಸೇವೆಯನ್ನು ನಿಸ್ವಾರ್ಥದಿಂದ ಮಾಡುವರು ಎಂದು ಮನವಿ ಮಾಡಿದರು ಈ ಸಂದರ್ಭದ ಮಾದ್ಯಮಗಳೊಂದಿಗೆ ಮಾತಾಡಿದ ಅವರು, ನಮ್ಮ ಪಕ್ಷ ಕಾರ್ಯಕರ್ತರ ಆಧಾರಿತ ಪಕ್ಷ ಎಲ್ಲ ಅಧಿಕಾರ ಅವರಿಂದಾಗಿಯೇ ಬಂದಿದೆ. ಈಗ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರಿಗೆ ನೈತಿಕ ಬೆಂಬಲ ನೀಡುವುದು ನಮ್ಮ ಕರ್ತವ್ಯ ಹಾಗಾಗಿ ಎಲ್ಲರಿಗೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

Ad Widget

Related posts

ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಗುರಿಯಾಗಬೇಕು: ವಿನೋದ್ ಪ್ರಕಾಶ್

Malenadu Mirror Desk

ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು

Malenadu Mirror Desk

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.