Malenadu Mitra
ರಾಜ್ಯ

ಸಿಎಂ ತವರು ಶಿಕಾರಿಪುರಲ್ಲಿ ಅತೀ ಹೆಚ್ಚು ಮತದಾನ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡನೇ ಹಂತದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಶೇ.೮೦.೯೧ ರಷ್ಟು ಮತದಾನವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ ಅತಿ ಹೆಚ್ಚು ಅಂದರೆ ಶಿಕಾರಿಪುರದಲ್ಲಿ ಶೇ.೮೬.೩೫ ಮತದಾನವಾಗಿದ್ದರೆ, ಸೊರಬ ತಾಲೂಕಿನಲ್ಲಿ ೮೬.೨೨, ಸಾಗರದಲ್ಲಿ ೭೯.೮೪ ಹಾಗೂ ಹೊಸನಗರ ತಾಲೂಕಿನಲ್ಲಿ ಶೇ.೬೯.೩೫ ಮತದಾನವಾಗಿದೆ.

ಹೊಸನಗರ ತಾಲೂಕು ಹರತಾಳಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಹರತಾಳು ಹಾಲಪ್ಪ

ನಾಲ್ಕೂ ತಾಲೂಕುಗಳಲ್ಲಿಯೂ ಶಾಂತಿಯುತ ಮತದಾನವಾಗಿದೆ. ಮಾಜಿ ಸಚಿವ ಹಾಗೂ ಸಾಗರ ಶಾಸಕರಾದ ಹರತಾಳು ಹಾಲಪ್ಪ ಅವರು ಹೊಸನಗರ ತಾಲೂಕು ಹರತಾಳು ಗ್ರಾಮದಲ್ಲಿ ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿದರು. ಅದೇ ರೀತಿ ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬೇಳೂರು ಗ್ರಾಮದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಸಾಗರ ತಾಲೂಕು ಬೇಳೂರಿನಲ್ಲಿ ಮತಚಲಾಯಿಸಿದ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

ಹೊಸನಗರ ತಾಲೂಕು ಹೆದ್ದಾರಿಪುರ ಗ್ರಾಮ ಪಂಚಾಯಿತಿಯ ಕಲ್ಲೂರು ಗ್ರಾಮದಲ್ಲಿ ಕಾಂಗ್ರೆಸ್ ,ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಮೂವರೂ ಮಹಿಳಾ ಅಭ್ಯರ್ಥಿಗಳು ಒಂದೇ ಬೆಂಚಿನಲ್ಲಿ ಕುಳಿತು ಮತ ಕೇಳುವ ಮೂಲಕ ಗಮನ ಸೆಳೆದರು.

ಶಿಕಾರಿಪುರ ಸಾಲೂರಿನಲ್ಲಿ ಸಾಲಾಗಿ ನಿಂತು ಮತಚಲಾಯಿಸಿದ ಮತದಾರರು

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕುರುಡು ಕಾಂಚಾಣದ ಮೇಲಾಟ ಮಿರಿಮೀರಿದ್ದು, ಎರಡನೇ ಹಂತದಲ್ಲಿಯೂ ಯಥೇಚ್ಛ ಹಣ ವ್ಯಯವಾಗಿದೆ ಎನ್ನಲಾಗಿದೆ. ಬಂದುಬಾAಧವರಲ್ಲಿಯೇ ನಡೆಯುವ ಈ ಚುನಾವಣೆಯಲ್ಲಿಯೂ ೨ರಿಂದ ನಾಲ್ಕು ಸಾವಿರದವರೆಗೂ ಮತಗಳನ್ನು ಬಿಕರಿಗೆ ಇಡಲಾಗಿತ್ತು ಎನ್ನಲಾಗಿದೆ. ಊರಿನ ಹಣವುಳ್ಳವರು ಪ್ರತಿಷ್ಠೆಗಾಗಿಯೇ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಅದನ್ನು ಉಳಿಸಿಕೊಳ್ಳಲು ಬೇಕಾಬಿಟ್ಟಿ ಹಣ ಖರ್ಚು ಮಾಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

Ad Widget

Related posts

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Malenadu Mirror Desk

ನಕ್ಸಲ್‌ ನಾಯಕ ಬಿ ಜಿ ಕೃಷ್ಣಮೂರ್ತಿ ನಾಳೆ ಶಿವಮೊಗ್ಗ ಕೋರ್ಟ್‌ಗೆ , ಬಿಗಿ ಭದ್ರತೆಯಲ್ಲಿ ಕೇರಳದಿಂದ ಕರೆತರುತ್ತಿರುವ ಪೊಲೀಸರು

Malenadu Mirror Desk

ಸಹ್ಯಾದ್ರಿ ಕ್ಯಾಂಪಸ್‍ನಲ್ಲೇ ಖೇಲೋ ಇಂಡಿಯಾ, ಕಾಲೇಜು ಪ್ರಾಚಾರ್ಯರ ಸಭೆಯಲ್ಲಿ ಸಂಸದ ರಾಘವೇಂದ್ರ ಅವರ ಮನವರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.