Malenadu Mitra
ರಾಜ್ಯ

ಕಡ್ಜಿರ ಕಚ್ಚಿ ಯುವಕ ಸಾವು

ತೀರ್ಥಹಳ್ಳಿ ಹುಲಿ ಕಡಜಲು ಹುಳ ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ಮಂಡ ಗದ್ದೆ ಸಿಂಗನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದೆ.ಕೀಗಡಿ ಜಯರಾಮ ಗೌಡರ ಪುತ್ರ ಅಖಿಲೇಶ್(39) ಹುಲಿ ಕಡಜಲು ಹುಳ(ಜೇನಿನ ಮಾದರಿ ಗೂಡು ಕಟ್ಟುವ ಹುಳು, ಬಂಡಾರ ಬಡ್ಕಿ ಅಂತಾನು ಅಂತಾರೆ) ಕಚ್ಚಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲಿದ್ದ ಅಖಿಲೇಶ್ ಕೊರನಾ ಹಿನ್ನೆಲೆ ಊರಿಗೆ ಮರಳಿದ್ದರು. ಭಾನುವಾರ ಮನೆಯಲ್ಲಿ ಕೊನೆ ತೆಗೆಯುವ ವೇಳೆ ತೋಟಕ್ಕೆ ಹೋಗಿದ್ದಾಗ ಹುಳಗಳು ಕಚ್ಚಿವೆ. ಸುಮಾರು 50 ಕ್ಕೂ ಹೆಚ್ಚು ಕಡ್ಜಿರಾ ಅಖಲೇಶ್ ರನ್ನ ಕಚ್ಚಿದೆ ಎಂದು ತಿಳಿದು ಬಂದಿದೆ.ಅಖಿಲೇಶ್ ಗೆ ಬಾಯಿಂದ ನೊರೆ ಬಂದಿದೆ. ಮೆಗ್ಗಾನ್ ಗೆ ಸಾಗಿಸುವ ವೇಳೆ ಅವರು ಸಾವನ್ನು ಕಂಡಿದ್ದು ತಂದೆಯ ಎದುರೇ ಈ ದುರಂತದ ಘಟನೆ ನಡೆದಿದೆ! ಅಖಿಲೇಶ್ ವಿವಾಹಿತರಾಗಿದ್ದು,ಪತ್ನಿ, 2 ತಿಂಗಳ ಪುಟ್ಟ ಮಗು ಇದೆ

Ad Widget

Related posts

ಸೂರ್ಯ ನಮಸ್ಕಾರಕ್ಕೂ ಸ್ವಾತಂತ್ರ್ಯೋತ್ಸವಕ್ಕೂ ಏನು ಸಂಬಂಧ ; ಡಿಎಸ್ ಎಸ್ ಗುರುಮೂರ್ತಿ ಪ್ರಶ್ನೆ

Malenadu Mirror Desk

ಮಧು ಬೆಂಬಲಿಸಿ ಹಲವರು ಕಾಂಗ್ರೆಸ್ ಸೇರ್ಪಡೆ

Malenadu Mirror Desk

ವಿಕ್ರಂ ಗೌಡ ಎನ್ ಕೌಂಟರ್: ದಶಕದ ಬಳಿಕ ನಕ್ಸಲರ ಇರುವಿಕೆ ಮತ್ತೆ ಸಾಬೀತು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.