Malenadu Mitra
ತೀರ್ಥಹಳ್ಳಿರಾಜ್ಯಶಿವಮೊಗ್ಗ

ತೆಪ್ಪೋತ್ಸವ ವೈಭವ ಹೇಗಿತ್ತು ಗೊತ್ತಾ ?

ತೀರ್ಥಹಳ್ಳಿ; ಆಗಸದಲ್ಲಿ ನಕ್ಷತ್ರಗಳ ಚಿತ್ತಾರ ಬಿಡಿಸುವ ಪಟಾಕಿಗಳು, ಬೆಳಕಿನಾಟಕ್ಕೆ ತಾಳ ಹಾಕುತಿದ್ದ ನೀರಿನಲೆಗಳು, ಕಣ್ಣು ಹಾಯಿಸಿದಷ್ಟಕ್ಕೂ ಜನ..ಜನ ಇದು ಎಳ್ಳಮವಾಸ್ಯೆ ಅಂತಿಮ ದಿನವಾದ ಶುಕ್ರವಾರ ತುಂಗೆಯ ತಟದಲ್ಲಿರುವ ಶ್ರೀರಾಮೇಶ್ವರ ದೇವರ ತೆಪ್ಪೋತ್ಸವದ ದೃಶ್ಯ. ಕೊರೊನ ಭಯದಲ್ಲಿ ಮನೆಯೊಳಗೆ ಕುಳಿತಿದ್ದ ಮಲೆ ಸೀಮೆಯ ಜನ ಐತಿಹಾಸಿಕ ತೆಪ್ಪೋತ್ಸವ ಕಣ್ತುಂಬಿಕೊಳ್ಳಲು ತುಂಗೆಯ ಮರಳುಗುಡ್ಡೆಯಲ್ಲಿ ಜಮಾಯಿಸಿತ್ತು. ತುಂಗೆಗೆ ಕಟ್ಟಿದ್ದ ಕಮಾನು ಸೇತುವೆ ದೀಪಾಲಂಕಾರದಿಂದ ಜಗಮಗಿಸುತ್ತಿದ್ದರೆ, ಮಹಿಳೆಯರು ಮಕ್ಕಳಾದಿಯಾಗಿ ತೆಪ್ಪದ ಮೇಲೆ ದೇವರ ತೇರನ್ನು ನೋಡಿ ಭಕ್ತಿ ಪರವಶವಾದರು.

ಮಲೆನಾಡಿನ ಪ್ರಸಿದ್ದ ತೆಪ್ಪೋತ್ಸವಕ್ಕೆ ಪ್ರತಿ ಬಾರಿ ಸಹಸ್ರಾರು ಸಂಖ್ಯೆಯಲ್ಲಿ ಜನ ಹರಿದು ಬರುತ್ತಿದ್ದರು. ಈ ಬಾರಿ ಜನ ಅಷ್ಟಿಲ್ಲದಿದ್ದರೂ, ಸಂಭ್ರಮಕ್ಕೇನೂ ಕೊರತೆ ಇರಲಿಲ್ಲ. ದೇವರ ಮೂರ್ತಿಯನ್ನು ವಿಶೇಷ ಪೂಜೆ ನಂತರ ತುಂಗಾ ತೀರಕ್ಕೆ ತಂದು ತೆಪ್ಪೋತ್ಸವದಲ್ಲಿರಿಸಿ ಪೂಜೆ ಸಲ್ಲಿಸಿದ ನಂತರ ತುಂಗೆಯಲ್ಲಿ ಸುತ್ತು ಬರಿಸಿದರು.
ಜನಪದ ಉತ್ಸವ;
ಈ ಬಾರಿ ವಿಶೇಷವಾಗಿ ಜಾನಪದಕ್ಕೆ ಒತ್ತು ನೀಡಿ ತುಂಗೆಯದಡದಲ್ಲಿ ಜನಪದ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.ಕ್ಷೇತ್ರದ ಶಾಸಕ ಆರಗ ಜ್ಙಾನೇಂದ್ರ ಉತ್ಸವವನ್ನು ಉದ್ಘಾಟಿಸಿದರು.

Ad Widget

Related posts

ಗೋಮಾಳ, ಕಂದಾಯ ಭೂಮಿಯಲ್ಲಿ ಈಚಲು,ತೆಂಗು, ತಾಳೆ ಮರನೆಡಿ, ಈಡಿಗ ಸಮುದಾಯಕ್ಕೆ ಶಿವಮೊಗ್ಗದಲ್ಲಿ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಹೇಳಿಕೆ

Malenadu Mirror Desk

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Malenadu Mirror Desk

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಸೋಮವಾರ ನಗರ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ರಜೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.