Malenadu Mitra
ರಾಜ್ಯ

ಗೋಮಾತೆಗೆ ಪೂಜೆ ಸಲ್ಲಿಸಿ ಹತ್ಯೆ ನಿಷೇಧ ಕಾನೂನು ಜಾರಿ ಘೋಷಣೆ

ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಯಾವ ಕಾರಣಕ್ಕೂ ಗೋ ಹತ್ಯೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಗೋ ಹತ್ಯೆ ನಿಷೇಧ ವಿಧೇಯಕವನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಸೋಮವಾರ ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಯಡಿಯೂರಪ್ಪ ಅವರು ಗೋ ಪೂಜೆ ನೆರವೇರಿಸಿ ಸರಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಘೋಷಿಸಿದ್ದಾರೆ.

Ad Widget

Related posts

ಕುವೆಂಪು ವಿವಿ ಆಡಳಿತ ಅಧ್ಯಾಪಕರ ಹಿತಾಸಕ್ತಿ ಕಾಯಲಿ

Malenadu Mirror Desk

ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು, ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಸರ್ಜಿ ಅಭಿಮತ

Malenadu Mirror Desk

ಕುಲಾಂತರಿ ತಳಿಯಿಂದ ಕೃಷಿ ಸಂಸ್ಕೃತಿ ನಾಶ : ರೈತ ಸಂಘ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.