Malenadu Mitra
ರಾಜ್ಯಶಿವಮೊಗ್ಗ

ಬಾಲ ಬಿಚ್ಚಿದರೆ ಹುಷಾರ್: ರೌಡಿಗಳಿಗೆ ಎಚ್ಚರಿಕೆ

ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ವೃತ್ತದ ವ್ಯಾಪ್ತಿಯ ರೌಡಿಗಳನ್ನು ಠಾಣೆಗೆ ಕರೆಸಿದ ಎಸ್ಪಿ ಶಾಂತರಾಜ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಗರದಲ್ಲಿ ಬಾರ್‌ಗಳ ಬಳಿ ಗಲಾಟೆ ಹಾಗೂ ಆಯುಧ ಸಾಗಿಸುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಡಿಎಆರ್ ಸಭಾಂಗಣದಲಿ ರೌಡಿ ಪರೇಡ್ ನಡೆಸಿದ ಎಸ್ಪಿ ರೌಡಿಗಳಿಗೆ ಎಚ್ಚರಿಕೆ ನೀಡಿದರು.
ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಡ್ಯಾನ್ಸ್ ಮಾಸ್ಟರ್ ಕೊಲೆಯಾಗಿತ್ತು. ಇದಲ್ಲದೆ ಸರಗಳ್ಳತನ ಪ್ರಕರಣಗಳೂ ವರದಿಯಾಗಿದ್ದವು. ದೊಡ್ಡಪೇಟೆ, ಕೋಟೆ ,ಜಯನಗರ ಹಾಗೂ ತುಂಗಾನಗರ ಪೊಲಿಸ್ ಠಾಣೆ ವ್ಯಾಪ್ತಿಯ ಒಟ್ಟು ೧೫೬ ರೌಡಿಗಳನ್ನು ಕರೆಸಲಾಗಿತ್ತು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ, ಮತ್ತು ಒಂದು ಬ್ಲೇಡ್ ಇಟ್ಟುಕೊಂಡು ಓಡಾಡಿದರೂ, ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡುವುದಾಗಿ ಎಸ್ಪಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಎಎಸ್ಪಿ ಶೇಖರ್, ಡಿವೈಎಸ್ಪಿ ಈಶ್ವರ್ ನಾಯ್ಕ್ ಹಾಗೂ ಸಿಪಿಐಗಳು ಹಾಜರಿದ್ದರು

Ad Widget

Related posts

ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಹೆಸರಿಡಲು ಆಗ್ರಹ

Malenadu Mirror Desk

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ , ಶಿವಮೊಗ್ಗದಲ್ಲಿ  ಸಂಪೂರ್ಣ ಕೇಸರಿಮಯ

Malenadu Mirror Desk

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.