Malenadu Mitra
ರಾಜ್ಯಶಿವಮೊಗ್ಗ

ಹೆಚ್ಚುವರಿ ಕೆಲಸ ಬೇಡ: ಅಂಗನವಾಡಿ ಕಾರ್ಯಕರ್ತೆಯರು

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು ಅವೈಜ್ಞಾನಿಕವಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹತ್ತು ಹಲವು ಕೆಲಸಗಳನ್ನು ನಿಯೋಜಿಸಲಾಗಿದೆ. ಹೀಗಿರುವಾಗ ಮತ್ತೆ ಹೆಚ್ಚುವರಿ ಹೊರೆ ಬೇಡ. ಈ ಸಂಬಂಧ ನ್ಯಾಯ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಅದು ಇತ್ಯರ್ಥವಾಗುವ ತನಕ ಸಮೀಕ್ಷೆ ಹೋಗದಂತೆ ತಡೆಯಬೇಕು ಎಂದು ಮನವಿ ಸಲ್ಲಿಸಲಾಯಿತು.

Ad Widget

Related posts

ಮೆಗ್ಗಾನ್ ಅವ್ಯವಸ್ಥೆ ಸರಿಪಡಿಸಲು ಪ್ರಗತಿಪರರ ಆಗ್ರಹ

Malenadu Mirror Desk

ಅರ್ಜಿ ಹಾಕದವರಿಗೂ ಹಕ್ಕುಪತ್ರ ,ಬಗರ್ ಹುಕುಂ ಸಮಿತಿ ಸಭೆಯಲ್ಲಿ ಕುಮಾರ್ ಬಂಗಾರಪ್ಪ ಗರಂ

Malenadu Mirror Desk

ಎಂಎಲ್‌ಸಿ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡುವೆ
ಈಶ್ವರಪ್ಪ ಮತ್ತವರ ಮಗನ ವಿರುದ್ಧ ಚುನಾವಣೆಗೆ ಸ್ಪರ್ಧಿಸುವೆ ಎಂದ ಆಯನೂರು ಮಂಜುನಾಥ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.