Malenadu Mitra
ರಾಜ್ಯಶಿವಮೊಗ್ಗ

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಕೇಂದ್ರ ಸರಕಾರದ ಪೆಟ್ರೋಲ್ ,ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವೆಲಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಶುಕ್ರವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಂಧನ ಬೆಲೆ ಏರಿಕೆಯಿಂದ ದೇಶದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನರ ಜೀವನ ದುಸ್ತರವಾಗಿದೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಇಂಧನ ಬೆಲೆ ನಿಯಂತ್ರಣಕ್ಕೆ ಸರಕಾರಕ್ಕೆ ಸೂಚನೆ ನೀಡಬೇಕು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್ ಒಂದಕ್ಕೆ ೫೨ ರೂ. ಇದೆ. ಆದರೆ ದೇಶದಲ್ಲಿ ಲೀಟರ್ ಪೆಟ್ರೋಲ್ ದರ ೯೦ ಕ್ಕಿಂತ ಅಧಿಕವಾಗಿದೆ. ಇದರಿಂದ ಸಾರಿಗೆ ಹಾಗೂ ಸರಕು ಸಾಗಣೆ ವಾಹನಗಳ ಬೆಲೆಯೂ ಏರಿಕೆಯಾಗಿದ್ದು, ಸಾಮಾನ್ಯ ಜನರು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಪಾರ್ಟಿಯ ಕಾರ್ಯಕರ್ತರು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಜಮ್ಮಿರ್ ಅನ್ವರ್, ಅಯೂಬ್ ಸಾಬ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Ad Widget

Related posts

ಮಣಿಪಾಲ ಆರೋಗ್ಯ ಕಾರ್ಡ್- 2021ರ ನೊಂದಾವಣೆಗೆ ಚಾಲನೆ

Malenadu Mirror Desk

ವೀರಶೈವ ಯುವ ಸಂಗಮದಿಂದ ವಿಸ್ಮಯ

Malenadu Mirror Desk

ಸಿಎಂ ತವರು ಶಿಕಾರಿಪುರಲ್ಲಿ ಅತೀ ಹೆಚ್ಚು ಮತದಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.