Malenadu Mitra
ರಾಜ್ಯಶಿಕಾರಿಪುರ

ಈಸೂರು ಕಾಲೇಜಿನಲ್ಲಿ ಜಿಎಸ್ ಎಸ್ ಜನ್ಮದಿನಾಚರಣೆ

ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಬದುಕು ಬರಹ ವಿದ್ಯಾರ್ಥಿಗಳಿಗೆ ಸದಾ ಸ್ಫೂರ್ತಿ ನೀಡುವಂತಿದ್ದು, ಮಕ್ಕಳು ಅವರ ಸಾಹಿತ್ಯ ಓದಬೇಕು ಎಂದು ಶಿಕಾರಿಪುರ ತಾಲೂಕು ಈಸೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಪ್ರವೀಣ ಮಹಿಷಿ ಹೇಳಿದರು.
ಕಾಲೇಜಿನಲಿ ಆಯೋಜಿಸಿದ್ದ ಜಿ.ಎಸ್.ಎಸ್ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿವರುದ್ರಪ್ಪ ಅವರಂತಹ ಮಹಾನ್ ಕವಿ ಜನ್ಮವೆತ್ತ ಊರಿನಲ್ಲಿ ನಾವೆಲ್ಲ ಕರ್ತವ್ಯ ನಿರ್ವಹಿಸುವುದೇ ಒಂದು ಧನ್ಯತಾ ಭಾವ. ಅವರ ಸಾಹಿತ್ಯದಲ್ಲಿನ ಜೀವನ ಮೌಲ್ಯಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡ ಉಪನ್ಯಾಸಕ ಎನ್.ಜಿ.ಗಂಗಪ್ಪ ಶಿವರುದ್ರಪ್ಪ ಅವರ ಬದುಕು ಬರಹ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಥಮ,ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಾಜರಿದ್ದರು.

Ad Widget

Related posts

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯುವ ಕಾಂಗ್ರೆಸ್ಆಕ್ರೋಶ

Malenadu Mirror Desk

ಎರಡನೇ ಪತ್ನಿ ದೂರವಾಗಲು ಕಾರಣ ಎಂದು ರೌಡಿಶೀಟರ್‌ನನ್ನು ಕೊಲೆಮಾಡಿದಾತ ಪೊಲೀಸರಿಗೆ ಶರಣು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.