Malenadu Mitra
ರಾಜ್ಯಶಿವಮೊಗ್ಗ

ಅಯ್ಯಪ್ಪಸ್ವಾಮಿ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ

ಶಿವಮೊಗ್ಗ ನಗರದ ಗೋಪಾಳ ರಂಗನಾಥ ಸ್ವಾಮಿ ಬಡಾವಣೆಯಲ್ಲಿ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಅಯ್ಯಪ್ಪ ಸ್ವಾಮಿಯ ನೂತನ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನೆ ಮಹೋತ್ಸವ ಇಂದು ಮತ್ತು ನಾಳೆ ನಡೆಯಲಿದೆ.
ದೇವಸ್ಥಾನ ಆಡಳಿತಮಂಡಳಿ ಅಧ್ಯಕ್ಷ ಸುರೇಶ್ ಕೆ ಬಾಳೆಗುಂಡಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ದೇವಸ್ಥಾನವನ್ನು ೧.೨೦ ಕೋಟಿ ರೂ. ವೆಚ್ಚದಲ್ಲಿ ದಏಗುಲ ಅಭಿವೃದ್ಧಿ ಮಾಡಲಾಗಿದೆ. ಈ ಭಾಗದಲ್ಲಿ ಅಯ್ಯಪ್ಪ ಸ್ವಾಮಿಯ ಪಂಚಲೋಹ ವಿಗ್ರಹ ಅಪರೂಪವಾಗಿದೆ. ಐದು ಲಕ್ಷ ರೂ. ವೆಚ್ಚದಲ್ಲಿ ವಿಗ್ರಹ ಸಿದ್ದಪಡಿಸಿದೆ. ಮೊದಲ ದಿನ ಕೊಪ್ಪ ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ್ ಗುರೂಜಿ ಅವರು ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ರವೀಂರಭಟ್ ಹಾಗೂ ಮಂಜುನಾಥ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆ.೨೧ ರಂದು ಬೆಳಗ್ಗೆ ೧೧ ಕ್ಕೆ ಸಭಾ ಕಾರ್ಯಕ್ರಮದಲ್ಲಿ ವಿನಯ್ ಗುರೂಜಿ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ ಗುರುಸ್ವಾಮಿ ರೋಜಾ ಷಣ್ಮುಗಂ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಪಾಲಿಕೆ ಸದಸ್ಯ ಮಂಜುನಾಥ್ ಮತ್ತಿರರು ಬಾಗವಹಿಸಲಿದ್ದಾರೆ ಎಂದು ಸುರೇಶ್ ಮಾಹಿತಿ ನೀಡಿದ್ದಾರೆ, ಬಿ.ಸಿರಾಜಣ್ಣ, ಗೋಪಾಲಕೃಷ್ಣ, ಸುರೇಶ್ ಬಾಬು, ರುದ್ರೇಗೌಡ ಮತ್ತಿತರರು ಇದ್ದರು.

Ad Widget

Related posts

ಬಾ.ಮ ಶ್ರೀಕಂಠ ರಿಗೆ ಬಿಜೆಪಿಯಿಂದ ಅಭಿನಂದನೆ

Malenadu Mirror Desk

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk

ಹರ್ಷ ಕೊಲೆ: ಮತ್ತಿಬ್ಬರ ಬಂಧನ,ಶನಿವಾರದಿಂದ ಶಾಲೆ ಆರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.