Malenadu Mitra
ರಾಜ್ಯಶಿವಮೊಗ್ಗ

ಯಾಗ ಶಾಲೆಗೆ ಸಿ ಎಂ ಭೂಮಿ ಪೂಜೆ

ಶಿವಮೊಗ್ಗದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ಶ್ರೀ ಮಾರುತಿ ಪ್ರತಿಷ್ಠಾನಂನ ಉದ್ದೇಶಿತ ಯಾಗಶಾಲೆ ಮತ್ತು ಭೋಜನಾಲಯದ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಿದ್ದಾರೆ. ಬೆಳ್ಳಿ ಇಟ್ಟಿಗೆ ಸಮರ್ಪಣೆಯೊಂದಿಗೆ ಸಿಎಂ ಪೂಜೆಗೆ ಚಾಲನೆ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು, ಬೆಳ್ಳಿ ಯಂತ್ರ ಸಮರ್ಪಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ದೇಗುಲ ಸಂಚಾಲಕ ಸುರೇಶ್ ಕೆ ಬಾಳೆಗುಂಡಿ ಹಾಗೂ ಧರ್ಮದರ್ಶಿ ರವೀಂದ್ರಭಟ್ ಕುಟುಂಬದವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶತರುದ್ರಯಾಗದ ಮೂಲಕ ಮುಖ್ಯಮಂತ್ರಿ ಅವರನ್ನು ಋತ್ವಿಜರು ಆಶೀರ್ವದಿಸಿದರು. ಈ ಸಂದರ್ಭ ಮುಖ್ಯ ಅವರಿಗೆ ಸ್ಫಟಿಕದ ಹಾರ ಹಾಕಿ ಗೌರವಿಸಲಾಯಿತು.ಈ ಸಂದರ್ಭ ಸಚಿವರಾದ ಬೈರತಿ ಬಸವರಾಜ್, ಶಾಸಕ ಆರಗ ಜ್ಞಾನೇಂದ್ರ ಮತ್ತಿತರರಿದ್ದರು.

Ad Widget

Related posts

ಪುನೀತ ದರ್ಶನಕ್ಕೆ ಜನಸಾಗರ, ಮಲೆನಾಡಿನೊಂದಿಗೆ ಮಧುರ ಬಾಂಧವ್ಯ ಹೊಂದಿದ್ದ ಅಪ್ಪು

Malenadu Mirror Desk

ಕಾರು ಪಲ್ಟಿ- ಸ್ಥಳದಲ್ಲೇ ಲೋಕೋಪಯೋಗಿ ಇಲಾಖೆ ಅಧಿಕಾರಿ ಸಾವು.

Malenadu Mirror Desk

ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯಿಂದ ಕೌಶಲ್ಯ ತರಬೇತಿ ಕೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.