Malenadu Mitra
ರಾಜ್ಯಹೊಸನಗರ

ಪಟಗುಪ್ಪ ಸೇತುವೆ, ದಶಕಗಳ ಕನಸು ಸಾಕಾರ

ಸಾಗರ ಹಾಗೂ ಹೊಸನಗರಕ್ಕೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನ ಪಟಗುಪ್ಪ ಸೇತುವೆಯನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು. ಬಹುವರ್ಷಗಳ ನಿರೀಕ್ಷೆಯಾಗಿದ್ದ ಈ ಸೇತುವೆಯಿಂದ ಶರಾವತಿ ಹಿನ್ನೀರಿನ ೫೦ ಗ್ರಾಮಗಳಿಗೆ ಅನುಕೂಲವಾಗಲಿದೆ.
೫೬ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯನ್ನು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷರೂ ಆದ ಹರತಾಳು ಹಾಲಪ್ಪ ಉದ್ಘಾಟಿಸಿದರು. ಸಂಸದ ಬಿ.ವೈ.ರಾಘವೇಂದ್ರ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರಗಜ್ಞಾನೇಂದ್ರ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿ,.ಪಂ.ಸದಸ್ಯ ಸುರೇಶ್ ಸ್ವಾಮಿರಾವ್, ಪ್ರಸನ್ನ ಕೆರೆಕೈ ,ಗಣಪತಿ ಬಿಳವಗೋಡು,ದೇವಾನಂದ, ತೀರ್ಥೇಶ್ ಮತ್ತಿತರರಿದ್ದರು.
ಕಾರ್ಯಕ್ರಮದ ಅಂಗವಾಗಿ ಹಿನ್ನೀರು ಉತ್ಸವ ಆಯೋಜಿಸಲಾಗಿತ್ತು. ವಿವಿಧಸಾಂಸ್ಕೃತಿಕಕಾರ್ಯಕ್ರಮಆಯೋಜಿಸಲಾಗಿತ್ತು.ಸೇತುವೆ ಲೋಕಾರ್ಪಣೆಕಾರ್ಯಕ್ರಮಈ ಭಾಗದಜನರಿಗೆಒಂದುರೀತಿಯ ಹಬ್ಬದ ವಾತಾವರಣ ತಂದಿತ್ತು.

Ad Widget

Related posts

ಶಿಶುಪಾಲನಾ ಕೇಂದ್ರ ರದ್ದು, ಕಾರ್ಮಿಕರ ಮಕ್ಕಳಿಗೆ ಸರಕಾರದಿಂದ ಅನ್ಯಾಯ: ಶಾಸಕ ಚೆನ್ನಬಸಪ್ಪ

Malenadu Mirror Desk

ನಾಡು ಕಟ್ಟುವಲ್ಲಿ ವಾರದ ಮಲ್ಲಪ್ಪ ಅವರ ಕೊಡುಗೆ ಹಿರಿದು

Malenadu Mirror Desk

ದೇಶಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಇನ್ವಿಸ್ಟಿಗೇಷನ್ ಯಾವುದು ಗೊತ್ತಾ?
ಇಂಡಿಯಾ ಸೈಬರ್ ಕಾಪ್ ಅವಾರ್ಡ್ ಅಂತಿಮ ಸುತ್ತಿಗೆ ಇನ್ಸ್ ಪೆಕ್ಟರ್ ಗುರುರಾಜ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.