Malenadu Mitra
ರಾಜ್ಯಶಿವಮೊಗ್ಗಸಾಗರ

ದೊಡ್ಡೇರಿ ಈರಪ್ಪರಿಗೆ ಗಣಪತಿಯಪ್ಪ ಪ್ರಶಸ್ತಿ ಕಾಗೋಡು ಚಳವಳಿ ನೆನಪು ಕಾರ್ಯಕ್ರಮ

ಸ್ವಾತಂತ್ರ್ಯಹೋರಾಟಗಾರ ಡಾ.ಹೆಚ್.ಗಣಪತಿಯಪ್ಪ ಸೇವಾಟ್ರಸ್ಟ್ ,ಸಾಗರ ತಾಲೂಕು ರೈತ ಸಂಘದ ಆಶ್ರಯದಲ್ಲಿ ಏಪ್ರಿಲ್ ೧೮ ರಂದು ಡಾ.ಹೆಚ್.ಗಣಪತಿಯಪ್ಪ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾಗೋಡು ಚಳವಳಿ ೭೦ ನೆನಪು ಮತ್ತು ಟ್ರಸ್ಟ್ನ ದಶಮಾನೋತ್ಸವ ನಿಮಿತ್ತ ನೀಡುತ್ತಿರುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮಂಡಗಳಲೆಯ ದೊಡ್ಡೇರಿ ಈರಪ್ಪ ಅವರಿಗೆ ಘೋಷಿಸಲಾಗಿದೆ. ಸಾಗರದ ಶೃಂಗೇರಿ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೈತ ನಾಯಕ ಕೆ.ಟಿ.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೋರಾಟದ ಈ ಹೊತ್ತಿನ ಆತಂಕಗಳು ವಿಷಯ ಕುರಿತು ಡಾ.ಮೋಹನ್ ಚಂದ್ರಗುತ್ತಿ ಮಾತನಾಡಲಿದ್ದಾರೆ.
ಟ್ರಸ್ಟ್ನ ಅಧ್ಯಕ್ಷರಾದ ಉಮೇಶ್ ಹಿರೇನೆಲ್ಲೂರು ಅಧ್ಯಕ್ಷತೆ ವಹಿಸುವರು. ವೇದಿಕೆಯಲ್ಲಿ ಶಾರದಾಮಠದ ಧರ್ಮದರ್ಶಿ ಅಶ್ವಿನ್‌ಕುಮಾರ್, ಪತ್ರಕರ್ತ ಜಿ.ನಾಗೇಶ್, ರಾಜೇಂದ್ರ ಆವಿನಹಳ್ಳಿ, ಜಿಲ್ಲಾ ಕನ್ನಡ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್, ಸಾಹಿತಿ ಪರಮೇಶ್ವರ ಕರೂರು, ರೈತಮುಖಂಡರಾದ ದಿನೇಶ್ ಶಿರವಾಳ,ಅಮೃತ್ ರಾಜ್ ತ್ಯಾಗರ್ತಿ ಮತ್ತಿತರರು ಭಾಗವಹಿಸುವರು.

Ad Widget

Related posts

ಫೌಂಡ್ರಿಮೆನ್ ಸಂಘಟನೆಗೆ ಉದ್ಯಮಿ ಚಂದ್ರಶೇಖರ್ ಆಯ್ಕೆ, ಶಿವಮೊಗ್ಗ ಫೌಂಡೇಷನ್ ಸಂಘಟನೆಗಳಿಂದ ಸನ್ಮಾನ

Malenadu Mirror Desk

ಸಿಗಂದೂರು ಚೌಡೇಶ್ವರಿ ಮೂಲಸ್ಥಳದಲ್ಲಿ ವಿಶೇಷ ಪೂಜೆ, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ದೇವಿ ದರ್ಶನ

Malenadu Mirror Desk

ಸಚಿವ ಸ್ಥಾನ ಹೋದರೆ ಗೂಟ ಹೋದಂತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.