Malenadu Mitra
ರಾಜ್ಯಶಿವಮೊಗ್ಗ

ಬಿಎಸ್‌ವೈ ಶೀಘ್ರ ಗುಣಮುಖ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.


ಉಪಚುನಾವಣೆ ಪ್ರಚಾರದಲ್ಲಿ ಬಿಡುವಿಲ್ಲದ ಪ್ರವಾಸದ ಕಾರಣದಿಂದ ಜ್ವರ ಮತ್ತು ಸುಸ್ತು ಕಾಣಿಸಿಕೊಂಡಿತ್ತು. ಎಂ.ಎಸ್.ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಇರುವುದು ದೃಢವಾಗಿದೆ. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರೊಂದಿಗೆ ಮಾತನಾಡಿದ್ದು, ಬೇರೆ ಯಾವುದೇ ತೊಂದರೆ ಇಲ್ಲ. ಮೊದಲ ಹಂತದ ಲಸಿಕೆ ಹಾಕಿಸಿಕೊಂಡಿರುವುದರಿAದ ಆತಂಕಪಡುವ ಅಗತ್ಯವಿಲ್ಲ ಮೂರು ದಿನದಲ್ಲಿ ಅವರು ಗುಣಮುಖಹೊಂದಲಿದ್ದಾರೆ ಎಂದು ಯಡಿಯೂರಪ್ಪ ಪುತ್ರರೂ ಆದ ಸಂಸದ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Ad Widget

Related posts

ಜಿಲ್ಲಾ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಗಾಳಿ, ಅಧ್ಯಕ್ಷಗಾದಿಗಾಗಿ ಹಲವರ ಪ್ರಯತ್ನ, ಮಧು ಬಂಗಾರಪ್ಪ ಒಲವಿದ್ದವರಿಗಿದೆ ಅದೃಷ್ಟ

Malenadu Mirror Desk

ಸಿಮ್ಸ್‍ನಲ್ಲಿ ಕೋವಿಡ್ ಡ್ರೈ ರನ್ ಹೇಗಿದೆ ಗೊತ್ತಾ

Malenadu Mirror Desk

ಧರ್ಮಕೇಂದ್ರಿತ ಸಂಗತಿಗಳಿಂದ ದಾರ್ಶನಿಕರ ಚಿಂತನೆ ಗೌಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.