Malenadu Mitra
ರಾಜ್ಯಶಿವಮೊಗ್ಗಹೊಸನಗರ

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.
ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9) ಮೃತ ನಿರ್ಭಾಗ್ಯ ಬಾಲಕರು. ಮನೆಯಲ್ಲಿ ಬುಧವಾರ ಮಧ್ಯಾಹ್ನ ಹೆತ್ತವರೊಂದಿಗೆ ಊಟ ಮಾಡಿದ ಮಕ್ಕಳು ತಮ್ಮ ಮನೆಯ ಜಾನುವಾರು ಹುಡುಕಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಗದ್ದೆಬಯಲಲ್ಲಿ ಯಾರೂ ಇಲ್ಲದ ಕಾರಣ ಗೊತ್ತಾಗಲಿಲ್ಲ. ಮೊದಲು ಬಿದ್ದವನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನೂ ಬಿದ್ದಿರುವ ಶಂಕೆಯಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಕುಮಾರಬಂಗಾರಪ್ಪ ಸರ್ವಾಧಿಕಾರಿ ಧೋರಣೆಯಿಂದ ಚಂದ್ರಗುತ್ತಿ ಜಾತ್ರೆಯಲ್ಲಿ ಅಸ್ತವ್ಯಸ್ತ: ಹುಲ್ತಿಕೊಪ್ಪ ಶ್ರೀಧರ್

Malenadu Mirror Desk

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

Malenadu Mirror Desk

ಯಡಿಯೂರಪ್ಪ ಕುಟುಂಬದ ವಿರುದ್ಧ ಟೀಕೆ ಖಂಡನೀಯ , ಟೀಕಿಸುವ ಮುನ್ನ ಆಯನೂರು ಮಂಜುನಾಥ್‌ ಎಚ್ಚರ ವಹಿಸಲಿ: ಹಾಲಪ್ಪ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.