Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸಾವಿರ ದಾಟಿದ ಸೋಂಕು, ಸಾಗರ,ಸೊರಬ, ಭದ್ರಾವತಿಯಲ್ಲಿ ಏರಿಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಸೋಮವಾರ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಒಟ್ಟು 1049 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 11 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 283 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 506ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 329 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 246,ಶಿಕಾರಿಪುರ 75,ತೀರ್ಥಹಳ್ಳಿಯಲ್ಲಿ 49 ,ಸೊರಬ 114,ಸಾಗರ 167,ಹೊಸನಗರ 54 ಹಾಗೂ ಇತರೆ ಜಿಲ್ಲೆಗಳ 15 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 62 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 5363 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆಸ್ಪತ್ರೆಗಳಲ್ಲಿ ಒತ್ತಡ
ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದಂತೆ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಈಗಾಗಲೇ ಬೆಡ್‍ಗಳು ಭರ್ತಿಯಾಗಿವೆ. ಆಸ್ಪತ್ರೆಯಿಂದ ಬಿಡುಗಡೆಯಾಗುವವರ ಸಂಖ್ಯೆ ಕಡಿಮೆಯಾಗಿದ್ದು, ಸೇರುವವ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಇರುವ ಸಿಬ್ಬಂದಿಗಳಿಗೂ ಕೆಲಸದ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.

Ad Widget

Related posts

ಅಭಿವೃದ್ಧಿ ಮತ್ತು ಸೌಹಾರ್ದ ಶಿವಮೊಗ್ಗ ನಮ್ಮ ದ್ಯೇಯ

Malenadu Mirror Desk

ಅರಸು ಎಂಬ ಪುಣ್ಯಾತ್ಮನಿಂದ ಪರಿಶಿಷ್ಟರು, ಹಿಂದುಳಿದವರು ಭೂ ಒಡೆಯರಾದರು, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಭೂ ಹೋರಾಟ ಮೆಲುಕು ಹಾಕಿದ ಕಾಗೋಡು ತಿಮ್ಮಪ್ಪ

Malenadu Mirror Desk

ಹರತಾಳು ಹಾಲಪ್ಪರ ಅಳಿಯ ಡಾ.ರಾಜ್‌ಕುಮಾರ್ ಸಂಬಂಧಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.