Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 720 ಮಂದಿಗೆ ಸೋಂಕು, 5 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಸಾವಿನ ಸಂಖ್ಯೆ ಇಳಿಕೆಯಾಗಿದ್ದು, ಶುಕ್ರವಾರದ ಮಟ್ಟಿಗೆ ಕೊಂಚ ಸಮಾಧಾನದ ಸಂಗತಿ.
ಜಿಲ್ಲೆಯಲ್ಲಿ 720 ಮಂದಿಗೆ ಸೋಂಕು ತಗುಲಿದ್ದು, 577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 557ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 209 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 103, ಶಿಕಾರಿಪುರ 41, ತೀರ್ಥಹಳ್ಳಿಯಲ್ಲಿ61,ಸೊರಬ78, ಸಾಗರ 171 ಹೊಸನಗರ 31 ಹಾಗೂ ಇತರೆ ಜಿಲ್ಲೆಗಳ 26 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 28 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7277ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ, ಆಯುಷ್ ವಿವಿ

Malenadu Mirror Desk

ಮಧುಗೆಲ್ಲಿಸಿ ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುವೆ, ಆನವಟ್ಟಿ ರೋಡ್‌ಶೋನಲ್ಲಿ ಶಿವರಾಜ್ ಕುಮಾರ್ ಮನವಿ

Malenadu Mirror Desk

ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.