Malenadu Mitra
ರಾಜ್ಯಶಿವಮೊಗ್ಗ

ವಾಹನ ಜಖಂ: ಇಬ್ಬರು ಆರೋಪಿಗಳ ಬಂಧನ

ಶಿವಮೊಗ್ಗ ನಗರದಲ್ಲಿ ಬುಧವಾರ ಮಧ್ಯರಾತ್ರಿ ವಾಹನಗಳನ್ನು ಜಖಂ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರಂನ ಶಾಹಿಲ್ ಖಾನ್ (21), ಭರ್ಮಪ್ಪನಗರದ ಮನ್ಸೂರ್ ಅಹಮದ್(32) ಬಂಧಿತ ಆರೋಪಿಗಳಾಗಿದ್ದಾರೆ. ಈ ವ್ಯಕ್ತಿಗಳು ರಾತ್ರಿವೇಳೆ ಕಬ್ಬಿಣದ ರಾಡುಗಳಿಂದ ಭರ್ಮಪ್ಪನಗರ ಹಾಗೂ ಸಿದ್ದಯ್ಯ ರಸ್ತೆಗಳಲ್ಲಿ ನಿಲ್ಲಿಸಿದ್ದ 12 ಕಾರು ,1 ಆಟೊ ಹಾಗೂ 5 ಬೈಕ್‍ಗಳನ್ನು ಜಖಂಗೊಳಿಸಿದ್ದರು. ಪ್ರಶ್ನಿಸಿದ್ದ ಜನರಿಗೆ ಚಾಕು ತೋರಿಸಿ ಅಶಾಂತಿ ಉಂಟುಮಾಡಿದ್ದರು. ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರ ವಿರುದ್ದ ಒಟ್ಟು 7 ಪ್ರಕರಣಗಳನ್ನು ದಾಖಲಿಸಿದ್ದಾರೆ. ಘಟನೆ ಹಿಂದೆ ಯಾರಿದ್ದಾರೆ. ಯಾವ ಕಾರಣಕ್ಕೆ ಈ ದುಷ್ಕøತ್ಯ ಎಸಗಲಾಗಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ರಾತ್ರಿ ನಡೆದ ಘಟನೆ ಖಂಡಿಸಿ ಬಿಜೆಪಿ ಮುಖಂಡರು ಎಸ್ಪಿಗೆ ದೂರು ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಬೆಳಗ್ಗೆ ಸಚಿವ ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Ad Widget

Related posts

ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ

Malenadu Mirror Desk

ವಿಶ್ವವಿದ್ಯಾಲಯಗಳ ಸಂಶೋಧನೆಯ ಲಾಭ ರೈತರಿಗೆ ದೊರೆಯಬೇಕು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Malenadu Mirror Desk

ಬಜರಂಗಳದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಡೆದ ಗಲಭೆ, ಕಲ್ಲು ತೂರಾಟ ಪ್ರಕರಣ, ಸಚಿವ ಈಶ್ವರಪ್ಪರನ್ನು ಮೊದಲ ಆರೋಪಿ ಮಾಡಲು ಕಾಂಗ್ರೆಸ್ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.