Malenadu Mitra
ರಾಜ್ಯಶಿವಮೊಗ್ಗಹೊಸನಗರ

ಹುಂಚಾ ಗ್ರಾಮದಲ್ಲಿ ಕೊರೊನಾಕ್ಕೆ ಯುವಕ ಬಲಿ.

ರಿಪ್ಪನ್‍ಪೇಟೆ: ಹುಂಚಾಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಯುವಕನೊಬ್ಬ ಬಲಿಯಾಗಿದ್ದಾರೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಯುವಕರಿಗೆ ಸ್ಪೂರ್ತಿಯಾಗಿದ್ದ ಹುಂಚಾ ಗ್ರಾಮದ ಉದಯೋನ್ನುಖ ಕೃಷಿಕ ಭಾನುಪ್ರಕಾಶ(37) ಕೊರೊನಾ ಸೋಂಕಿನಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತರಾಗಿದ್ದಾರೆ.
ಕೃಷಿ ಕಾರ್ಯ ಚಟುವಟಿಕೆಯೊಂದಿಗೆ ಸಮಾಜ ಸೇವೆಯ ಮೂಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಭಾನು ಪ್ರಕಾಶ್ .ಕೃಷಿ ಉತ್ಪನ್ನಗಳನ್ನು ಆನ್ ಲೈನ್ ಮೂಲಕ ಮಾರಾಟಮಾಡಿ ಕೃಷಿಯನ್ನು ಒಂದು ಹೊಸ ಆಯಾಮದಲ್ಲಿ ನೋಡಿದ್ದ , ಜಾತ್ರೆ ಹಾಗೂ ವಿಶೇಷ ದಿನಗಳಲ್ಲಿ ಹುಂಚಾ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನ ಹವ್ಯಾಸಿ ಕಲಾವಿದರಾಗಿದ್ದು. ಕ್ರೀಡೆ ಕಲೆ, ಕೃಷಿಯಲ್ಲಿ ಒಂದು ವಿಶಿಷ್ಟ ಉತ್ಸಾಹ ಹೊಂದಿದ್ದ ಇವರು ಹುಂಚಾ ಗ್ರಾಮದಲ್ಲಿ ಜನ ಸ್ನೇಹಿ ವ್ಯಕ್ತಿಯಾಗಿದ್ದರು, ಮೃತರಿಗೆ ,ತಾಯಿ .ಅಕ್ಕ ಮತ್ತು ಅಣ್ಣಾ ಇದ್ದಾರೆ.

Ad Widget

Related posts

ಕರ್ತವ್ಯನಿರತ ಎಹೆಚ್ ಸಿ ಸಾವು : ಸರ್ಕಾರಿ ಗೌರವದೊಂದಿಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ.

Malenadu Mirror Desk

ಒಂದೇ ಶಿಕಾರಿಗೆ ಹಲವು ಗುರಿಕಾರರು
ಶಾಸಕ ಈಶ್ವರಪ್ಪರಿಗೆ ಟಿಕೆಟ್ ತಪ್ಪಿಸಲು ತೆರೆಮರೆಯಲ್ಲಿ ತರಾವರಿ ತಂತ್ರ

Malenadu Mirror Desk

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ಬಂಧನಕ್ಕೆ ಎಸ್ ಡಿಪಿಐ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.