Malenadu Mitra
ರಾಜ್ಯಶಿವಮೊಗ್ಗ

ಕಣ್ಣೂರು ಗ್ರಾಮದಲ್ಲಿ ಸ್ಪೋಟ : ಮನೆಗಳು ಬಿರುಕು

ಶಿವಮೊಗ್ಗ: ಆನಂದಪುರ ಸಮೀಪದ ಗೌತಮಪುರ ಗ್ರಾ .ಪಂ. ವ್ಯಾಪ್ತಿಯ ಕಣ್ಣೂರು ಗ್ರಾಮದಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಏಕಾಏಕಿ ಸ್ಫೋಟಗೊಂಡು ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟ ಘಟನೆ ಶನಿವಾರ ನಡೆದಿದೆ.
ಗ್ರಾಮದ ಕರಿಯಪ್ಪ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕರಿಯಪ್ಪ ಮಗ ರವಿ ಶಿಕಾರಿ ನಡೆಸಲು ನಾಡ ಬಾಂಬ್ ತಯಾರಿಸಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶನಿವಾರ ಬೆಳಗ್ಗೆ 10.30 ಸುಮಾರಿಗೆ ಸ್ಫೋಟ ಉಂಟಾಗಿ ಬಚ್ಚಲು ಮನೆ ಬಿರುಕುಬಿಟ್ಟಿದೆ.ಸ್ಪೋಟದ ಪರಿಣಾಮ ಅಕ್ಕಪಕ್ಕದ ಮನೆಗಳ ಮೇಲ್ಚಾವಣಿ ಹಾರಿಹೋಗಿವೆ.ಜೊತೆಗೆ ಮನೆಯ ಗೋಡೆ ಬಿರುಕು ಬಿಟ್ಟಿದೆ. ಯಾವುದೇ ಜೀವ ಹಾನಿ ಉಂಟಾಗಿಲ್ಲ.ಸ್ಪೋಟದಿಂದ ಭೀತಿಗೊಂಡ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಇದು ಯಾವುದೇ ಬಾಂಬ್ ಇತ್ಯಾದಿ ಸ್ಪೋಟ ಗೊಂಡ ಸಾಕ್ಷಿ ಸಿಗುತ್ತಿಲ್ಲ .ಈ ಬಗ್ಗೆ ಬಾಂಬ್ ವಿಚಕ್ಷಣ ದಳಕ್ಕೆ ಮಾಹಿತಿ ನೀಡಲಾಗಿದೆ .ಅವರು ಬಂದು ತನಿಖೆ ನಡೆಸಿದ ಹೊರತು ಯಾವುದೇ ನಿರ್ಧಾರ ಸಾಧ್ಯವಿಲ್ಲ”” ಎಂದಿದ್ದಾರೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ನಮ್ಮ ಮನೆಯಲ್ಲಿ ಯಾವುದೇ ಸ್ಪೋಟಕ ವಸ್ತುಗಳಿಲ್ಲ. ಬಾಂಬ್ ತಯಾರಿಕೆ ಬಗ್ಗೆ ನಮಗೆ ಜ್ಞಾನವಿಲ್ಲ. ಗ್ರಾಮಸ್ಥರ ಆರೋಪ ನಿರಾಧಾರ ವಾಗಿದೆ. ಪ್ರತಿದಿನದಂತೆ ಬಚ್ಚಲುಮನೆಯ ಹಂಡೆಯ ನೀರು ಕಾಯಿಸಲು ಬೆಂಕಿ ಹಾಕಿದಾಗ ಏನೋ ಶಬ್ದ ಉಂಟಾಗಿದೆ. ಕಾರಣ ನಮಗೂ ತಿಳಿಯುತ್ತಿಲ್ಲ

ಕರಿಯಪ್ಪ , ಮನೆಯ ಯಜಮಾನ

Ad Widget

Related posts

ಶರಾವತಿ ಸಂತ್ರಸ್ತರ ಪುನರ್‌ವಸತಿಗೆ ಮದನ್‌ಗೋಪಾಲ್ ವರದಿ ಜಾರಿಯಾಗಲಿ : ಮಲೆನಾಡು ರೈತ ಹೋರಾಟ ಸಮಿತಿ ಆಗ್ರಹ

Malenadu Mirror Desk

ತ್ಯಾಜ್ಯ ನಿರ್ಮೂಲನೆಗೆ ಪಾಕ ಶಾಲೆಯೇ ಪಾಠ ಶಾಲೆ ಆಗಲಿ

Malenadu Mirror Desk

ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ: 6397 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.