Malenadu Mitra
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು oಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪೆನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು. ಟೆಲಿಕಾಂ ಮತ್ತು ಇಂಟರ್‍ನೆಟ್ ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗಳ ವಾಹನ ಸಂಚಾರಕ್ಕೆ ಅವಕಾಶವಿದೆ.

ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ. ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅವಕಾಶವಿದೆ. ತಳ್ಳುಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು. ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಕೊಂಡೊಯ್ಯಬಹುದು. ಎಲ್ಲಾ ರೀತಿಯ ಸಾಮಾಗ್ರಿಗಳ ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್‍ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶವಿದೆ.

ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ, 40ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಟ 5ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Ad Widget

Related posts

ಹಿರಿಯ ಸಾಹಿತಿ,ಹೋರಾಟಗಾರ ಚಂಪಾ ನಿಧನ: ಪ್ರಖರ ಬರಹಗಾರ, ನಿಷ್ಠುರ ಸಿದ್ಧಾಂತಿಯನ್ನು ಕಳೆದುಕೊಂಡು ಕರುನಾಡು

Malenadu Mirror Desk

ಕಾರ್ಮಿಕ ಚಳವಳಿ ಹುಲಿ ಸವಾರಿ

Malenadu Mirror Desk

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.