Malenadu Mitra
ರಾಜ್ಯಶಿವಮೊಗ್ಗ

ಸಾಗುವಾನಿ ಸೈಜುಗಳ ಅಕ್ರಮ ಸಾಗಾಟ: ಪ್ರಕರಣ ದಾಖಲು

ಶಿವಮೊಗ್ಗನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವಾನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ಸುಬೇರ್ ಉಲ್ಲಾ ಹಾಗೂ ಜಿಯಾಉಲ್ಲಾ ಮತ್ತು ಇತರರ ಪೈಕಿ ಆರೋಪಿ ಜಿಯಾಉಲ್ಲಾ ಮತ್ತು ಇತರರು ತಪ್ಪಿಸಿಕೊಂಡಿರುತ್ತಾರೆ. ಆದರೆ ಮೊದಲ ಇಬ್ಬರು ಆರೋಪಿಗಳನ್ನು ಬಂಧಿಸಿ ಮೊಕದ್ದಮೆ ದಾಖಲಿಸಿ ಆರೋಪಿಗಳಿಂದ ಸಾಗುವನಿ ಸೈಜು ಮತ್ತು ಮಾರುತಿ ಓಮಿನಿಯನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಕಾರ್ಯಾಚರಣೆ ವೇಳೆ ವಲಯ ಅರಣ್ಯಾಧಿಕಾರಿಗಳಾದ ಗಿರೀಶ್ ಸಂಕ್ರಿ, ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಮಜೀದ್, ಉಮೇಶ್ ನಾಯ್ಕ್, ಅರಣ್ಯ ರಕ್ಷಕರಾದ ಅವಿನಾಶ್.ಜಿ, ಆನಂದ.ಜೆ, ನೀಲಮ್ಮ ದಾದ್ಮಿ, ಚೆಲುವಮಣಿ, ಮಂಜುನಾಥ.ಬಿ.ಬಿ ಇದ್ದರು.

Ad Widget

Related posts

ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ

Malenadu Mirror Desk

ದುಡಿಮೆಯೇ ದೊಡ್ಡಪ್ಪ ಎಂಬ ಧ್ಯೇಯದ ಮೇಲೆ ಬಜೆಟ್ ಮಂಡನೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.