ಜೆಡಿಎಸ್ ನಾಯಕಿ ಹಾಗೂ ಮಾಜಿ ಶಾಸಕಿ ಶಾರದಾಪೂರ್ಯನಾಯ್ಕ ಕಾರು ಅಪಘಾತವಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಷದ ಸಭೆಗೆ ಬೆಂಗಳೂರಿಗೆ ಹೋಗುತ್ತಿದ್ದ ಶಾರದಮ್ಮ ಅವರ ಕಾರು ನೆಲಮಂಗಲ ಬಳಿ ಪಲ್ಟಿಯಾಯಿತು. ಅಪಘಾತದಲ್ಲಿ ಅವರ ಎಡಗಾಲು ಮೂಳೆ ಮುರಿತ ಕಂಡುಬಂದಿದ್ದು, ಅವರನ್ನು ಬೆಂಗಳೂರಿನ ರಾಂಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕ ರವಿ ಅವರಿಗೂ ಗಾಯಗಳಾಗಿದ್ದು, ಅವರಿಗೂ ಚಿಕಿತ್ಸೆ ಕೊಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಗೆ ಹಾಜರಾಗಲು ಶಾರದಮ್ಮ ಅವರು ಶಿವಮೊಗ್ಗದಿಂದ ಹೊರಟಿದ್ದರು ಎನ್ನಲಾಗಿದೆ.




