Malenadu Mitra
Uncategorized

ಸೊರಬ ತಾಲೂಕಲ್ಲಿ ಕಳ್ಳಭಟ್ಟಿ ಕೊಳೆ ನಾಶ: ಕೇಸು ದಾಖಲು

ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ನೆಲ್ಲೂರಿನಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು ತಾಲ್ಲೂಕಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 110 ಲೀಟರ್ ಬೆಲ್ಲದ ಕೊಳೆ ಹಾಗೂ 20ಲೀಟರ್ ಕಳ್ಳಭಟ್ಟಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ.
ಸಾಗರ ಉಪ ವಿಭಾಗದ ಅಬಕಾರಿ ಅಧೀಕ್ಷಕಿ ಡಿ.ಲೀಲಾವತಿ ಹಾಗೂ ಸೊರಬ ವಲಯ ಅಬಕಾರಿ ನಿರೀಕ್ಷಕ ಶ್ರೀನಾಥ್ ನೇತೃತ್ವದ ತಂಡ ದಾಳಿ ನಡೆಸಿ, ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದ ಬಲವೀಂದ್ರಪ್ಪ ಅವರ ಮನೆಯ ಹಿತ್ತಲಲ್ಲಿ ಕಳ್ಳಭಟ್ಟಿ ತಯಾರಿಸಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 110 ಲೀಟರ್ ಬೆಲ್ಲದ ಕೊಳೆ ಹಾಗೂ ಸೊರಬ ಪಟ್ಟಣದ ಪ್ರವೀಣ್ ಅವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 20 ಲೀಟರ ಬೆಲ್ಲದ ಕೊಳೆ ಹಾಗೂ 20ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಅಣ್ಣಪ್ಪ, ರಾಮಪ್ಪ, ಬಾಲಚಂದ್ರ, ದೇವರಾಜ್, ಮಹಾಂತೇಶ್, ಪುಟ್ಟಪ್ಪ, ದೇವರಾಜ್, ಪುಟ್ಟಪ್ಪ, ಕಾಂತರಾಜ್ ಇದ್ದರು.

Ad Widget

Related posts

ರೈತರಿಗೆ ಒಂದಿಂಚು ಭೂಮಿ ನೀಡುವ ಕಾರ್‍ಯಕ್ರಮ ನೀಡದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು :ಕಾಗೋಡು ತಿಮ್ಮಪ್ಪ

Malenadu Mirror Desk

ಹಾಲು ಉತ್ಪಾದಕರ ಬೆನ್ನಿಗೆ ಶಿಮುಲ್ : ಶ್ರೀಪಾದ ನಿಸರಾಣಿ

Malenadu Mirror Desk

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಭಾರೀ ವಿರೋಧ : ಸ್ಥಳಾಂತರಕ್ಕೆ ಪಟ್ಟು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.