Malenadu Mitra
ರಾಜ್ಯಶಿವಮೊಗ್ಗಹೊಸನಗರ

ಅಕ್ಕ-ತಂಗಿಯನ್ನು ಬಲಿ ಪಡೆದ ಮಹಾಮಾರಿ ಒಂದೇ ಕುಟುಂಬದ 7 ಮಂದಿಗೆ ಸೋಂಕು

ಮಹಾಮಾರಿ ಕೊರೊನಕ್ಕೆ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ಕ ತಂಗಿ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ವರದಿಯಾಗಿದೆ.

ಇಲ್ಲಿನ ಕ್ರಿಶ್ಚಿಯನ್ ಕಾಲೋನಿಯಲ್ಲಿ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಅದರಲ್ಲಿ ವ್ಯಾನಿ ಗೊನ್ಸಾಲ್ವಿಸ್ (59) ಮತ್ತು ಅಪ್ಪಿ ಗೊನ್ಸಾಲ್ವಿಸ್ (52) ಗುರುವಾರ ಬೆಳಗ್ಗೆಯಿಂದ ಸಂಜೆಯ ಒಳಗೆ ನಿಧನರಾಗಿದ್ದಾರೆ. ಮೂರು ದಿನದ ಹಿಂದೆ ಕೊರೊನಾ ಟೆಸ್ಟ್‍ಗೆ ಈ ಕುಟುಂಬ ಒಳಗಾಗಿದ್ದು 7 ಜನರ ವರದಿ ಪಾಸಿಟಿವ್ ಬಂದಿತ್ತು.
ನಂತರ ಕ್ರಿಶ್ಚಿಯನ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಹೋದರಿಯರಿಗೆ ಸೋಂಕಿನ ತೀವ್ರತೆ ಹೆಚ್ಚಿದ ಕಾರಣ ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಬ್ಬರಿಗೂ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡು ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆಲವೇ ಗಂಟೆಯ ಅಂತರದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

Ad Widget

Related posts

ಬೇಳೂರು ಬರೀ ಕೈ ಫಕೀರ, ವಿಜಯೇಂದ್ರರಿಗೆ 126 ಕೋಟಿ ರೂ.ಆಸ್ತಿ
ಆಯೋಗಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ಆಸ್ತಿ ವಿವರ

Malenadu Mirror Desk

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk

ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.