Malenadu Mitra
ರಾಜ್ಯಶಿವಮೊಗ್ಗ

ಅಪಾಯದ ಮಟ್ಟದಲಿ ತುಂಗಾ, ಪ್ರವಾಹದ ಭೀತಿ ಜೋಗದಲ್ಲಿ ರುದ್ರ ರಮಣೀಯ ದೃಶ್ಯ

ಮಲೆನಾಡಿನಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಾ ನದಿಗೆ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಶಿವಮೊಗ್ಗ ನಗರದ ಕುಂಬಾರಗುಂಡಿ, ಸೀಗೆಹಟ್ಟಿ ಹಾಗೂ ರಾಜೀವ್‍ಗಾಂಧಿ ಬಡಾವಣೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಇಮಾಮ್ ಬಾಡದ ಬಳಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಕಾರಣ ಜಿಲ್ಲಾಡಳಿತ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ.
ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 2.42 ಲಕ್ಷ ಕ್ಯೂಸೆಕ್ ಒಳಹರಿವಿದೆ. ಜೋಗ ಜಲಪಾತ ಅಬ್ಬರಿಸುತ್ತಿದ್ದು, ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಭದ್ರಾ ಜಲಾಶಯಕ್ಕೆ ಒಂದೇ ದಿನ ನಾಲ್ಕು ಅಡಿಗಳಷ್ಟು ನೀರು ಬಂದಿದೆ.

Ad Widget

Related posts

ಹಸೆ ಚಿತ್ತಾರ ಕಲೆಯ ಕುರಿತ ಮೊದಲ ಸಮಗ್ರ ಸಂಶೋಧನಾ ಕಾರ್ಯ ಶ್ಲಾಘನೀಯ: ಕಾಗೋಡು ತಿಮ್ಮಪ್ಪ

Malenadu Mirror Desk

ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು?  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಪ್ರಶ್ನೆ

Malenadu Mirror Desk

ಹಳಿಗೆ ಸಿಲುಕಿದ ಎಮ್ಮೆಗಳು, ಇಂಟರ್ ಸಿಟಿ ಟ್ರೈನ್ ವಿಳಂಬ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.