Malenadu Mitra
ರಾಜ್ಯಶಿವಮೊಗ್ಗ

ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ

ಶಿವಮೊಗ್ಗ ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅತಿವೃಷ್ಟಿಯಿಂದ ಶಿವಮೊಗ್ಗ ನಗರದ ಸುಮಾರು 15 ಭಾಗಗಳಲ್ಲಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಆದರೆ ಈ ಬಾರಿ ಮುಂಗಾರು ಆಗಮನಕ್ಕಿಂತ ಮೊದಲೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡು, ರಾಜಕಾಲುವೆಗಳನ್ನು ಸ್ವಚ್ಛಗೊಳಿಸಲಾಗಿದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನಗರದಲ್ಲಿ ಯಾವುದೇ ಮನೆಗಳು ಬಿದ್ದಿಲ್ಲ.

ನಗರದ ನಾಲ್ಕು ಕಡೆಗಳಲ್ಲಿ ನೀರು ನುಗ್ಗಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ. ನಗರದಲ್ಲಿ ನಾಲ್ಕು ಕಡೆಗಳಲ್ಲಿ ತಾತ್ಕಾಲಿಕವಾಗಿ ಅತಿವೃಷ್ಟಿ ಪೀಡಿತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹಾನಿಗೆ ಪರಿಹಾರ ನೀಡುವುದು ಸೇರಿದಂತೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ಮಂಗಳವಾರ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಚಿವರು ನಗರದ ಇಮಾಂ ಬಾಡ, ಶಾಂತಮ್ಮ ಲೇಔಟ್ ಮತ್ತು, ಕುಂಬಾರಗುಂಡಿ ಪ್ರದೇಶಗಳಿಗೆ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Ad Widget

Related posts

ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ ಗೆಲವು ಶತಸಿದ್ಧ: ಕಾಂಗ್ರೆಸ್ ನಾಯಕರು, ಹೊಸಮುಖ ಮತ್ತು ಶಾಂತಿಸೌಹಾರ್ದತೆ ಶಿವಮೊಗ್ಗಜನ ಬಯಸುತ್ತಾರೆ

Malenadu Mirror Desk

ಗೀತಕ್ಕ ಸೋಲಿನ ಹೊಣೆ ನಾನೇ ಹೊರುವೆ , ಶಿವಮೊಗ್ಗದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ  

Malenadu Mirror Desk

ಹರತಾಳು ಹಾಲಪ್ಪರ ಅಳಿಯ ಡಾ.ರಾಜ್‌ಕುಮಾರ್ ಸಂಬಂಧಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.