Malenadu Mitra
ರಾಜ್ಯಸಾಗರ

ಸಾಗರ ಕಾಸ್ಪಾಡಿ ಕೆರೆಗೆ ಬಿದ್ದ ಬಸ್:27ಕ್ಕೂ ಹೆಚ್ಚು ಜನಕ್ಕೆ ಗಾಯ , ಒಬ್ಬ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಕೆರೆಗೆ ಸರಕಾರಿ ಬಸ್ ಉರುಳಿಬಿದ್ದು ಯುವಕನೋರ್ವ ಸಾವಿಗೀಡಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಚಾಲಕ ಎದುರಿನಿಂದ ಬಂದ ಬೈಕಿಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋದಾಗ ಬಸ್ ನೇರವಾಗಿ ಕೆರೆಗೆ ಉರುಳಿದೆ.

ಶಿವಮೊಗ್ಗದಿಂದ ಸಿಗಂದೂರಿಗೆ ಬೈಕಲ್ಲಿ ಹೊರಟಿದ್ದ ದೀಪಕ್ ಮತ್ತು ಶಬರೀಶ್ ಬೈಕ್ ಗೆ ಬಸ್ ಡಿಕ್ಕಿಯಾಗಿ ಕೆರೆಗೆ ಹಾರಿದೆ. ತೀವ್ರ ಗಾಯಗೊಂಡಿದ್ದ ದೀಪಕ್ ಅಸುನೀಗಿದ್ದು, ಶಬರೀಶ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸ್ನಲ್ಲಿ 27 ಮಂದಿ ಪ್ರಯಾಣಿಕರಿದ್ದರು. ರಕ್ಷಣಾ ಕಾರ್ಯ ಮುಂದುವರಿದಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಶಿಸ್ತು, ಪರಿಶ್ರಮದಿಂದ ಸಾಧನೆ: ಡಿವೈಎಸ್ಪಿ ಕೆ.ಎಲ್.ಗಣೇಶ್

Malenadu Mirror Desk

ಶ್ರೀಕಾಂತ್‌ಗೆ ಜನ್ಮದಿನ ಸಂಭ್ರಮ, ಆಟೋ ಕಾಂಪ್ಲೆಕ್ಸ್‌ನಲ್ಲಿ ಅಭಿಮಾನಿಗಳಿಂದ ಸನ್ಮಾನ

Malenadu Mirror Desk

ಬಡವರಿಗೆ ನೆರವಾಗುವುದೇ ಮಾನವೀಯತೆ: ಎಂ.ಶ್ರೀಕಾಂತ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.