Malenadu Mitra
ರಾಜ್ಯಶಿವಮೊಗ್ಗಹೊಸನಗರ

ನೂತನ ಸಚಿವರಿಗೆ ರೇಣುಕಾನಂದ ಶ್ರೀ ಅಭಿನಂದನೆ

ಶಿವಮೊಗ್ಗ ಜಿಲ್ಲೆ ಪ್ರತಿನಿಧಿಸುವ ನೂತನ ಸಚಿವರುಗಳಾದ ಕೆ.ಎಸ್.ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರು ತಮ್ಮ ಅವಧಿಯಲ್ಲಿ ಜನಪರ ಕೆಲಸಗಳಿಂದಾಗಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.

ಜಿಲ್ಲೆಯ ಈಡಿಗರಿಗೆ ಸಚಿವ ಸ್ಥಾನ ಬೇಕು


ಈಡಿಗ ಸಮುದಾಯದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಶ್ರೀಗಳು, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಶಿವಮೊಗ್ಗದಲ್ಲಿ ಬಹುಸಂಖ್ಯಾತರಾಗಿರುವ ಈಡಿಗರಿಗೆ ಒಂದು ಸಚಿವಸ್ಥಾನ ನೀಡಬೇಕೆಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

Ad Widget

Related posts

ಕಾಂಗ್ರೆಸ್‌ನತ್ತ ಆಯನೂರು ಮಂಜುನಾಥ್ ?, ಈಶ್ವರಪ್ಪ ಎದುರು ಸ್ಪರ್ಧೆ

Malenadu Mirror Desk

ಈಡಿಗ ಸಮಾಜಕ್ಕೂ ಪ್ರಣವಾನಂದ ಸ್ವಾಮೀಜಿಗೂ ಯಾವುದೇ ಸಂಬಂಧ ವಿಲ್ಲ, ಕರ್ನಾಟಕ ಪ್ರದೇಶ ಈಡಿಗ ಸಂಘದ ಹೇಳಿಕೆ

Malenadu Mirror Desk

ಕೊರೋನಾ ಓಡಿಸುವಲ್ಲಿ ಮೋದಿ ಅವರು ಯಶಸ್ವಿಯಾಗಿದ್ದಾರೆ: ಕೆ.ಎಸ್. ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.